Advertisement
ಸುದ್ದಿಗಳು

ಯುವಜನತೆ ಕೃಷಿಗೆ ಬರಬೇಕು, ರೈತರು ಉದ್ಯಮಿಗಳಾಗಬೇಕು: ಸಿಎಂ ಸಿದ್ದರಾಮಯ್ಯ ಕರೆ

Share

ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಹಾಗೂ ರೈತರು ಉತ್ಪಾದನೋತ್ತರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ–2026 ಹಾಗೂ ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಬೆಳೆ ಬೆಳೆಯುವ ಮಟ್ಟಕ್ಕೆ ಸೀಮಿತರಾಗದೆ ಉದ್ಯಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು. ರೈತರು ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿದ್ದು, ಇದರಿಂದ ಕೃಷಿಗೆ ಹೆಚ್ಚುವರಿ ಆದಾಯ ಮತ್ತು ಮೌಲ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ರೈತರಿಗೆ ವಿವಿಧ ರೀತಿಯ ನೆರವು ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ, ಕೃಷಿ ಯಂತ್ರೋಪಕರಣಗಳ ಖರೀದಿಗೆ ₹1,500 ಕೋಟಿ ಸಹಾಯಧನ, ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ, ಈವರೆಗೆ ರೈತರಿಗೆ ₹6,000 ಕೋಟಿ ವಿಮಾ ಪರಿಹಾರ ವಿತರಿಸಲಾಗಿದೆ. ಇದಲ್ಲದೆ, ಕೃಷಿಭಾಗ್ಯ ಯೋಜನೆಯಡಿ ₹200 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಯಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ಉದ್ಯಮಶೀಲತೆ ಸೇರಿಕೊಂಡರೆ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ. ಆದ್ದರಿಂದ ಯುವಜನತೆ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿ, ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಇದನ್ನೂ ಓದಿ…

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 minutes ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

9 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

10 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

16 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

17 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

19 hours ago