Advertisement
ಸುದ್ದಿಗಳು

ಯುವಜನತೆ ಕೃಷಿಗೆ ಬರಬೇಕು, ರೈತರು ಉದ್ಯಮಿಗಳಾಗಬೇಕು: ಸಿಎಂ ಸಿದ್ದರಾಮಯ್ಯ ಕರೆ

Share

ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಹಾಗೂ ರೈತರು ಉತ್ಪಾದನೋತ್ತರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ–2026 ಹಾಗೂ ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಬೆಳೆ ಬೆಳೆಯುವ ಮಟ್ಟಕ್ಕೆ ಸೀಮಿತರಾಗದೆ ಉದ್ಯಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು. ರೈತರು ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿದ್ದು, ಇದರಿಂದ ಕೃಷಿಗೆ ಹೆಚ್ಚುವರಿ ಆದಾಯ ಮತ್ತು ಮೌಲ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ರೈತರಿಗೆ ವಿವಿಧ ರೀತಿಯ ನೆರವು ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ, ಕೃಷಿ ಯಂತ್ರೋಪಕರಣಗಳ ಖರೀದಿಗೆ ₹1,500 ಕೋಟಿ ಸಹಾಯಧನ, ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ, ಈವರೆಗೆ ರೈತರಿಗೆ ₹6,000 ಕೋಟಿ ವಿಮಾ ಪರಿಹಾರ ವಿತರಿಸಲಾಗಿದೆ. ಇದಲ್ಲದೆ, ಕೃಷಿಭಾಗ್ಯ ಯೋಜನೆಯಡಿ ₹200 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಯಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ಉದ್ಯಮಶೀಲತೆ ಸೇರಿಕೊಂಡರೆ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ. ಆದ್ದರಿಂದ ಯುವಜನತೆ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿ, ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಇದನ್ನೂ ಓದಿ…

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

7 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

13 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

14 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

21 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

22 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

22 hours ago