Advertisement
Opinion

ನೀವು ಡಿವಿಡೆಂಡ್‌ ಪಡೆದುಕೊಂಡಿದ್ದೀರಾ…?

Share

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಹುತೇಕ ಸದಸ್ಯರೂ ಹಳ್ಳಿಗರು. ಸಹಕಾರಿ ಸಂಘಗಳ ನಿಯಮಗಳನ್ನು ಅಷ್ಟೊಂದು ಅಧ್ಯಯನ ಮಾಡಿದವರು ಹೆಚ್ಚಿನ  ಜನರಿಲ್ಲ. ಹಾಗಾಗಿ ಅನೇಕ ನಿಯಮಗಳನ್ನು ಅರ್ಥೈಸಿಕೊಳ್ಳುವುದೂ ಅನೇಕರುಗಳಿಗೆ ಕಷ್ಟವಾಗುತ್ತದೆ. ಸಹಕಾರಿ ಸಂಘ-ಸಾಲ-ಉಳಿತಾಯ ಇಷ್ಟೇ ಆಗಿದೆ.

ಇತ್ತೀಚೆಗೆ ಬಹುತೇಕ ಸಹಕಾರಿ ಸಂಘಗಳೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸಾಕಷ್ಟು ಲಾಭ ಗಳಿಸುತ್ತಿವೆ.ಗಳಿಸಿದ ಲಾಭದಲ್ಲಿ ಒಂದು ಭಾಗವನ್ನು ತನ್ನ ಸದಸ್ಯರಿಗೆ ಡಿವಿಡೆಂಟ್ ಮುಖಾಂತರ ಹಂಚುತ್ತಲೂ ಇವೆ.ಆದರೆ ಸದಸ್ಯರಿಗಾಗಿ ಹಂಚಲು ಮೀಸಲಿಟ್ಟ ಡಿವಿಡೆಂಟ್ ಮೊತ್ತದ ಒಂದು ದೊಡ್ಡ ಭಾಗವನ್ನು ಸದಸ್ಯರು ಪಡೆದುಕೊಳ್ಳದೇ ಇರುವುದೂ ಗೋಚರಿಸುತ್ತಿದೆ.

ಕಾಲಕಾಲಕ್ಕೆ ಮರುನಿಗದಿಸಲಾದ ಸದಸ್ಯತನಾ ಶುಲ್ಕವನ್ನು ಪಾವತಿಸದ ಸದಸ್ಯರುಗಳಿಗೆ,ಸುಸ್ತಿ‌ ಸಾಲ ಹೊಂದಿದ ಸದಸ್ಯರುಗಳಿಗೆ ಮತ್ತು ಇದೇ ಮಾದರಿಯಲ್ಲಿ ನಿಗದಿಸಲಾದ ಕಾರಣಗಳಿಗಾಗಿ ಒಂದಷ್ಟು ಸದಸ್ಯರುಗಳ ಡಿವಿಡೆಂಟ್ ಮೊತ್ತ ಸಂದಾಯ ಮಾಡಲು ಸಹಕಾರ ಸಂಘ ನಿರಾಕರಿಸ ಬಹುದು.ಮೃತ ಸದಸ್ಯರುಗಳ ಹೆಸರಿನಲ್ಲಿ ಸಂದಾಯವಾಗ ಬೇಕಿರುವ ಡಿವಿಡೆಂಟ್ ಮೊತ್ತದ ವಿತರಣೆಯಲ್ಲೂ ಒಂದಷ್ಟು ಅಡೆತಡೆಗಳು ಎದುರಾಗ ಬಹುದು.ಆದರೆ ಈ ವರ್ಗದ ಸದಸ್ಯರ ಹೊರತಾಗಿಯೂ ದೊಡ್ಡ ಸಂಖ್ಯೆಯ ಸದಸ್ಯರುಗಳು ಡಿವಿಡೆಂಟ್ ಪಡೆದುಕೊಳ್ಳುತ್ತಿಲ್ಲ ಎಂಬುದು ಕುತೂಹಲಕಾರಿಯಾಗಿದೆ. ಕಾರಣ ಹುಡುಕುತ್ತಾ ಹೋದಂತೆ ಒಂದಷ್ಟು ವಿಷಯಗಳು ಬೆಳಕಿಗೆ ಬಂದವು.

ಒಂದಷ್ಟು ಸದಸ್ಯರು ಸಹಕಾರ ಸಂಘ ಲಾಭ ಗಳಿಸ ಬಲ್ಲದು ಮತ್ತು ಬಂದ ಲಾಭದಲ್ಲಿ ನಮಗೂ ಒಂದು ಭಾಗ ಕೊಡಬಹುದು ಎಂಬ ಕಲ್ಪನೆಯೂ ಇಲ್ಲದವರು.ಡಿವಿಡೆಂಟ್ ಎಂಬ ಪದದ ಅರ್ಥವೇ ಇವರಿಗಾಗಿಲ್ಲ.ಸಹಕಾರ ಸಂಘದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಡಿವಿಡೆಂಟ್ ಬಗ್ಗೆ ತಿಳಿದು ಕೊಳ್ಳದ ಸದಸ್ಯರುಗಳ ಸಂಖ್ಯೆಯೂ ಸಣ್ಣದೇನಲ್ಲ. ಯಾವ ಸದಸ್ಯರುಗಳಿಗೆ ಲಾಭಾಂಶ ಹಂಚಿಕೆಯಾಗ್ತದೆ ಎಂಬುದು ಬಹುತೇಕ ಸದಸ್ಯರುಗಳಿಗೂ ಗೊತ್ತಿಲ್ಲ.ತಾವೇನೂ ವ್ಯವಹಾರ ಮಾಡಿಲ್ಲ ಆದ್ದರಿಂದ ಸದಸ್ಯರಾಗಿದ್ದರೂ ತಮಗೆ ಲಾಭಾಂಶ ಸಿಗದು ಅಂತ ತಮ್ಮಷ್ಟಕ್ಕೆ ತಾವೇ ಊಹಿಸಿಕೊಂಡವರ ಸಂಖ್ಯೆ ಅಗಾಧವಾದದ್ದು.
ತಮಗೆ ವೈಯಕ್ತಿಕವಾಗಿ ಲಾಭಾಂಶ ಹಂಚಿಕೆಯ ಮಾಹಿತಿ ಬಂದಿಲ್ಲ ಎಂಬ ಕಾರಣಕ್ಕಾಗಿಯೂ ಈ ಬಗ್ಗೆ ವಿಚಾರಿಸದ ಸದಸ್ಯರುಗಳೂ ಇದ್ದರು.ತಾವು ಕಚೇರಿಗೆ ಹೋದಾಗ ಸಿಬ್ಬಂದಿಗಳು ಅವರಾಗಿಯೇ ಕರೆದು ಲಾಭಾಂಶದ ಬಗ್ಗೆ ಹೇಳಿಲ್ಲದ ಕಾರಣ ತಾವು ಲಾಭಾಂಶ ಪಡೆದುಕೊಂಡಿಲ್ಲ ಅಂತ ಒಂದಷ್ಟು ಸದಸ್ಯರ ದೂರು.

ಇವೆಲ್ಲದರ ಜೊತೆಗೆ ಹಳ್ಳಿಗರೇ ಬಹುತೇಕ ಸದಸ್ಯರಾಗಿರುವ ,ಆಧುನಿಕ ವ್ಯವಸ್ಥೆಗಳು ಕನಿಷ್ಟ ಮಟ್ಟದಲ್ಲಿರುವ ಸಂಸ್ಥೆಗಳಿಂದ ಅತ್ಯಾಧುನಿಕ ವ್ಯವಸ್ಥೆಯ,ಸೇವೆಯ ಬೇಡಿಕೆ ಮುಂದಿಡುವವರೂ ಇದ್ದಾರೆ. ಕೊನೆಗೆ ಹೀಗೆ ವರ್ಷಾನುಗಟ್ಟಲೆ ಸದಸ್ಯರು ಪಡೆಯಲು ವಿಫಲರಾದ ಲಾಭಾಂಶ ಮೊತ್ತ ಏನಾಗ್ತದೆ ಎಂಬ ಪ್ರಶ್ನೆ ಇದೆ.ಒಂದು ಹಂತದಲ್ಲಿ ಇಂತಹ ಮೊತ್ತವನ್ನು ಸಂಸ್ಥೆಯ ಕ್ಷೇಮನಿಧಿಗೆ ಸಂಸ್ಥೆ ವರ್ಗಾಯಿಸೀತು.

ಬರಹ :
ರಮೇಶ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

51 minutes ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

56 minutes ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

10 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

10 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

11 hours ago