ಚುನಾವಣೆಯ ದಿನ ಸಮೀಪಿಸಿದೆ. ಈ ನಡುವೆ ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಕನಸುಗಳನ್ನು ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತೆರೆದಿರಿಸಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಯು ಇಡೀ ರಾಜ್ಯದ ಪ್ರಮುಖ ಆರ್ಥಿಕ ಚಟುವಟಿಕೆಯ ಕೇಂದ್ರ. ಕರಾವಳಿ ಮೂಲಕ ಆಮದು ರಫ್ತು ವಹಿವಾಟು ಸಹಿತ ಹಲವು ಉದ್ದಿಮೆಗಳಿಗೆ ಕರಾವಳಿ ಜಿಲ್ಲೆಯೇ ಪ್ರಮುಖವಾದ ಆಧಾರವಾಗಿದೆ. ಈ ನಡುವೆ ಈ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡರೆ, ವಿಶೇಷವಾಗಿ ಕೃಷಿಯನ್ನೇ ಅವಲಂಬಿಸಿಕೊಂಡಿರುವ ಕರಾವಳಿ ಜಿಲ್ಲೆಯ ಕೃಷಿ ಅಭಿವೃದ್ಧಿಗೂ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ನವಯುಗ-ನವಪಥದಲ್ಲಿ ಹೇಳಿದ್ದಾರೆ.
ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದು, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನದ ಬಗ್ಗೆಯೂ ಹೇಳಿದ್ದಾರೆ. ಮತ್ಸ್ಯೋದ್ಯಮದ ಅಭಿವೃದ್ಧಿಯ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಮೀನುಗಾರರಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…