ಚುನಾವಣೆಯ ದಿನ ಸಮೀಪಿಸಿದೆ. ಈ ನಡುವೆ ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಕನಸುಗಳನ್ನು ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತೆರೆದಿರಿಸಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಯು ಇಡೀ ರಾಜ್ಯದ ಪ್ರಮುಖ ಆರ್ಥಿಕ ಚಟುವಟಿಕೆಯ ಕೇಂದ್ರ. ಕರಾವಳಿ ಮೂಲಕ ಆಮದು ರಫ್ತು ವಹಿವಾಟು ಸಹಿತ ಹಲವು ಉದ್ದಿಮೆಗಳಿಗೆ ಕರಾವಳಿ ಜಿಲ್ಲೆಯೇ ಪ್ರಮುಖವಾದ ಆಧಾರವಾಗಿದೆ. ಈ ನಡುವೆ ಈ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡರೆ, ವಿಶೇಷವಾಗಿ ಕೃಷಿಯನ್ನೇ ಅವಲಂಬಿಸಿಕೊಂಡಿರುವ ಕರಾವಳಿ ಜಿಲ್ಲೆಯ ಕೃಷಿ ಅಭಿವೃದ್ಧಿಗೂ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ನವಯುಗ-ನವಪಥದಲ್ಲಿ ಹೇಳಿದ್ದಾರೆ.
ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದು, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನದ ಬಗ್ಗೆಯೂ ಹೇಳಿದ್ದಾರೆ. ಮತ್ಸ್ಯೋದ್ಯಮದ ಅಭಿವೃದ್ಧಿಯ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಮೀನುಗಾರರಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…