Advertisement
MIRROR FOCUS

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

Share

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.

ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು ಸಮಗ್ರವಾಗಿ ಪರಿಗಣಿಸಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಮನವಿ ಮಾಡಿದರು.

ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಕಡಲಕೊರೆತ ನಿಯಂತ್ರಣಕ್ಕೆ ತೀರ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಎತ್ತರದಲ್ಲಿ ನಿರ್ಮಿಸಿದರೆ, ಕೊರೆತ ತಡೆಯುವುದರೊಂದಿಗೆ ಸಂಚಾರ ವ್ಯವಸ್ಥೆಯೂ ಸುಧಾರಿಸಲಿದೆ ಎಂದರು. ಇದು ಪ್ರವಾಸೋದ್ಯಮ ಕ್ಷೇತ್ರಕ್ಕೂ ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟರು. ಪಶ್ಚಿಮ ವಾಹಿನಿ ಯೋಜನೆಗೆ ಹೆಚ್ಚುವರಿ ಅನುದಾನ ಅಗತ್ಯವಿದೆ. ಉಳ್ಳಾಲ ಕೋಟೆಪುರ ಜೆಟ್ಟಿ ನಿರ್ಮಾಣದಿಂದ ಮಂಗಳೂರು ಬಂದರಿನ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದರು.

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಮಾತನಾಡಿ, ಕರಾವಳಿಯ ಮೂರು ಜಿಲ್ಲೆಗಳ 13 ಮೀನುಗಾರಿಕೆ ಬಂದರುಗಳಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತಲು ನಿರ್ಧರಿಸಲಾಗಿದೆ ಎಂದರು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿದ್ದು, ಅನುದಾನ ಸಿಗುವ ನಿರೀಕ್ಷೆ ಇದೆ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಡೆ ಮೀನು ಮಾರುಕಟ್ಟೆ ನಿರ್ಮಾಣ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.

ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕಡಲಕೊರೆತಕ್ಕೆ ಶಾಶ್ವತ ಪರಿಹಾರ ಒದಗಿಸಲು ಒತ್ತು ನೀಡಬೇಕು ಎಂದರು. ಪ್ರವಾಸೋದ್ಯಮ ಉತ್ತೇಜನಕ್ಕೆ ವಾಟರ್ ಮೆಟ್ರೋ ಯೋಜನೆ ಜಾರಿಗೆ ತರಬೇಕು ಎಂದು ಸೂಚಿಸಿದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಕರಾವಳಿ ನಿಯಂತ್ರಣ ವಲಯ (ಸಿಆರ್‍ಝಡ್) ಕಚೇರಿಯನ್ನು ಬೆಂಗಳೂರಿನಿಂದ ಮಂಗಳೂರು ಅಥವಾ ಉಡುಪಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು. ಬ್ರಹ್ಮಾವರ ಕೃಷಿ ವಿಜ್ಞಾನ ಕಾಲೇಜನ್ನು ಕೃಷಿ ವಿಶ್ವವಿದ್ಯಾನಿಲಯವಾಗಿ ಮೇಲ್ದರ್ಜೆಗೇರಿಸಬಹುದಾಗಿದೆ ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಮೀನುಗಾರಿಕೆ ಮತ್ತು ಬಂದರು ಇಲಾಖೆಗಳ ವಿಲೀನದಿಂದ ಅಭಿವೃದ್ಧಿ ವೇಗವಾಗಲಿದೆ ಎಂದರು. ಡ್ರೆಜ್ಜಿಂಗ್ ಗುತ್ತಿಗೆ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಸರ್ಕಾರವೇ ಯಂತ್ರ ಖರೀದಿಸಬೇಕು ಎಂದು ಸಲಹೆ ನೀಡಿದರು. ಪಶ್ಚಿಮ ಕರಾವಳಿಯಲ್ಲಿ ಸಮಾನ ಮೀನುಗಾರಿಕಾ ನೀತಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಕ್ಯಾನ್ಸರ್ ಮತ್ತು ಹೃದ್ರೋಗ ಚಿಕಿತ್ಸೆಗೆ ಉನ್ನತ ಸರಕಾರಿ ಆಸ್ಪತ್ರೆ ಕರಾವಳಿಯಲ್ಲಿ ಅಗತ್ಯವಿದೆ ಎಂದರು. ವಿದ್ಯಾರ್ಥಿಗಳ ಸಂಖ್ಯೆಯ ಹೆಚ್ಚಳ ಹಿನ್ನೆಲೆಯಲ್ಲಿ ಹಾಸ್ಟೆಲ್ ಸೌಲಭ್ಯ ಹೆಚ್ಚಿಸಬೇಕೆಂದು ಹೇಳಿದರು.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ರಾಜಾಕಾಲುವೆ ಡ್ರೆಜ್ಜಿಂಗ್ ಆಗದ ಕಾರಣ ಮಳೆಗಾಲದಲ್ಲಿ ನೆರೆ ಉಂಟಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಶಾಶ್ವತ ಪರಿಹಾರ ಅಗತ್ಯವಿದೆ ಎಂದರು.

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ :  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು. ರಬ್ಬರ್ ಬೆಳೆಗೆ ನಿರ್ದಿಷ್ಟ ಸ್ಥಾನಮಾನ ನೀಡಬೇಕು. ಕಡಬ ತಾಲೂಕಿನಲ್ಲಿ ಇನ್ನೂ ಇಲಾಖೆಗಳು ಸ್ಥಾಪನೆಯಾಗಿಲ್ಲ, ಸಾರ್ವಜನಿಕರಿಗೆ ಪುತ್ತೂರಿಗೆ ತೆರಳಬೇಕಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಭೆಯ ಅಂಶಗಳನ್ನು ಕ್ರಿಯಾಯೋಜನೆಯಲ್ಲಿ ಸೇರಿಸಿ ಸರ್ಕಾರಕ್ಕೆ ಅನುದಾನ ಬೇಡಿಕೆ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಕಾರ್ಯದರ್ಶಿ ಪ್ರದೀಪ್ ಡಿಸೋಜ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

13 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago