ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

March 12, 2026
9:11 PM
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಮುಂಗಾರಿಗೂ ಮೊದಲು ವಿಶೇಷ ಕರಾವಳಿ ಸಂರಕ್ಷಣಾ ಯೋಜನೆ ಹಾಗೂ ಹಣಕಾಸು ಬಿಡುಗಡೆ ಅಗತ್ಯವೆಂದು ಒತ್ತಾಯಿಸಲಾಗಿದೆ.

ಉಳ್ಳಾಲ–ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಸಮಸ್ಯೆ ಕುರಿತು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಗಂಭೀರವಾಗಿ ಧ್ವನಿಯೆತ್ತಿದ್ದಾರೆ.

ಲೋಕಸಭೆಯ ನಿಯಮ 377ರಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಕರಾವಳಿ ತೀರದ ಸಂರಕ್ಷಣೆಗೆ ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರಾವಳಿಯ ಅರ್ಧ ಭಾಗ ಕೊರೆತಕ್ಕೆ ಒಳಪಡುವ ಆತಂಕ :  ಸಂಸದರು ನೀಡಿದ ಮಾಹಿತಿಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ. ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ. (ಶೇ.48.40) ಭಾಗವು ಕಡಲ್ಕೊರೆತಕ್ಕೆ ಒಳಗಾಗಿದೆ. ಇದು ಕರ್ನಾಟಕ ರಾಜ್ಯದ ಸರಾಸರಿ ಶೇ.24 ಕ್ಕಿಂತ, ರಾಷ್ಟ್ರೀಯ ಸರಾಸರಿ ಶೇ.33.6 ಕ್ಕಿಂತಲೂ ಗಣನೀಯವಾಗಿ ಹೆಚ್ಚಾಗಿದೆ.

ಇದರಿಂದಾಗಿ ಜಿಲ್ಲೆಯ ಕೇವಲ ಶೇ.21.9 ರಷ್ಟು ಕರಾವಳಿ ಮಾತ್ರ ಸದ್ಯಕ್ಕೆ ಸುರಕ್ಷಿತವಾಗಿದೆ, ಇದು ನೆರೆಯ ಜಿಲ್ಲೆಗಳಿಗಿಂತಲೂ ಕಡಿಮೆ ಪ್ರಮಾಣ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹವಾಮಾನ ವೈಪರೀತ್ಯ, ಅಲೆಗಳ ಅಬ್ಬರದಿಂದ ಹೆಚ್ಚುತ್ತಿರುವ ಹಾನಿ : ಮುಂಗಾರು ಸಮಯದಲ್ಲಿ ಉಂಟಾಗುವ ಅಲೆಗಳ ಅಬ್ಬರ, ಬದಲಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಕರಾವಳಿಯಲ್ಲಿನ ಕೆಲವು ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಕಡಲ ತೀರವು ನಿರಂತರವಾಗಿ ಸವಕಳಿಗೆ ಒಳಗಾಗುತ್ತಿದೆ. ಈ ಕಾರಣದಿಂದ  ಮನೆಗಳು,  ರಸ್ತೆಗಳು,  ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಗೊಳಗಾಗುತ್ತಿದ್ದು, ಕರಾವಳಿ ಪ್ರದೇಶದ ಭೂಪ್ರದೇಶವೇ ಸಮುದ್ರಪಾಲಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಸದ ಚೌಟ ಅವರ ಪ್ರಕಾರ, ಇದು ಕೇವಲ ಭೌಗೋಳಿಕ ಸಮಸ್ಯೆಯಲ್ಲ; ಸಮುದ್ರವನ್ನೇ ನಂಬಿ ಬದುಕುತ್ತಿರುವ ಮೀನುಗಾರ ಸಮುದಾಯದ ಜೀವನೋಪಾಯಕ್ಕೆ ಎದುರಾಗಿರುವ ದೊಡ್ಡ ಅಪಾಯವಾಗಿದೆ.

ಮುಂಗಾರಿಗೂ ಮೊದಲು ತುರ್ತು ಕ್ರಮ ಅಗತ್ಯ : ಪ್ರತಿ ವರ್ಷವೂ ತೀವ್ರ ಸ್ವರೂಪದ ಕಡಲ್ಕೊರೆತ ಎದುರಿಸುತ್ತಿರುವ ದಕ್ಷಿಣ ಕನ್ನಡಕ್ಕೆ ಈ ಬಾರಿ ಮುಂಗಾರು ಪ್ರವೇಶ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತುರ್ತಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭೂ ವಿಜ್ಞಾನ ಸಚಿವಾಲಯ ಇವುಗಳ ಪರಸ್ಪರ ಸಮನ್ವಯದೊಂದಿಗೆ ಜಿಲ್ಲೆಗೆ ವಿಶೇಷ ಕರಾವಳಿ ಸಂರಕ್ಷಣಾ ಯೋಜನೆ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಾಶ್ವತ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಆಗಲಿ : ಕರಾವಳಿ ಸಂರಕ್ಷಣೆಗೆ ಮೀಸಲಾಗಿರುವ ಹಣಕಾಸಿನ ನೆರವನ್ನು ತಕ್ಷಣ ಬಿಡುಗಡೆ ಮಾಡಬೇಕು.  ಅದರ ಮೂಲಕ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳುವ ಜೊತೆಗೆ ಮೀನುಗಾರರ ಬದುಕನ್ನು ಸುರಕ್ಷಿತಗೊಳಿಸಬೇಕು ಎಂದು ಸಂಸದರು ಸದನದಲ್ಲಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹಾರಕ್ಕೆ ಕಾರ್ಯೋನ್ಮುಖವಾಗಬೇಕು ಎಂಬುದು ಅವರ ಮುಖ್ಯ ಬೇಡಿಕೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror