ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ. ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ, ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…