ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…