ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…