Advertisement
ಸುದ್ದಿಗಳು

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

Share

ಮಹಿಳಾ ಉದ್ಯಮಶೀಲತೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ ಮಂಡಳಿ (CDB) ಕೈಗೊಂಡಿರುವ ಯೋಜನೆಗಳು ಅತ್ಯಂತ ಪರಿಣಾಮಕಾರಿಯಾಗಿವೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವ ರಾಮನಾಥ್‌ ಠಾಕೂರ್‌ ಹೇಳಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಗೆ ಭೇಟಿ ನೀಡಿದ ಸಚಿವರು, ತೆಂಗು ಅಭಿವೃದ್ಧಿ ಮಂಡಳಿಯ ನೆರವಿನಿಂದ ಕಾರ್ಯನಿರ್ವಹಿಸುತ್ತಿರುವ ತೆಂಗು ಸಂಸ್ಕರಣಾ ಘಟಕಗಳು ಹಾಗೂ ರೈತ ಕ್ಲಸ್ಟರ್ ಪ್ರದೇಶಗಳನ್ನು ವೀಕ್ಷಿಸಿ ಪರಿಶೀಲಿಸಿದರು. ಸಚಿವರು Green Aura International ಎಂಬ ತೆಂಗು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದರು. ಮಹಿಳಾ ಉದ್ಯಮಿ ಸುಮಿಲಾ ಜಯರಾಜ್ ನಡೆಸುತ್ತಿರುವ ಈ ಘಟಕದಲ್ಲಿ ವರ್ಜಿನ್ ತೆಂಗಿನ ಎಣ್ಣೆ (VCO), ತೆಂಗಿನ ಹಾಲು ಹಾಗೂ VCO ಆಧಾರಿತ ಸೌಂದರ್ಯ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ.  ಮಹಿಳೆಯರು ಮುನ್ನಡೆಸುವ ಇಂತಹ ಕೃಷಿ ಆಧಾರಿತ ಉದ್ಯಮಗಳು ಗ್ರಾಮೀಣ ಉದ್ಯೋಗ ಸೃಷ್ಟಿ, ಕೃಷಿ ಮೌಲ್ಯ ಸರಪಳಿ ಬಲಪಡಿಸುವಿಕೆ ಹಾಗೂ ರೈತರ ಆದಾಯ ಹೆಚ್ಚಳಕ್ಕೆ ಪ್ರಮುಖವಾಗಿವೆ ಎಂದು ಸಚಿವರು ಹೇಳಿದರು.

ಈ ವೇಳೆ, ಕಡಿಮೆ ದರದಲ್ಲಿ ಆಮದು ಆಗುತ್ತಿರುವ ಡಿಸಿಕೇಟೆಡ್ ತೆಂಗಿನ ಪುಡಿ ದೇಶೀಯ ಸಂಸ್ಕರಣಾ ಘಟಕಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬ ವಿಷಯ ಸಚಿವರ ಗಮನಕ್ಕೆ ತರಲಾಯಿತು. ಸ್ಥಳೀಯ ತೆಂಗು ರೈತರು ಮತ್ತು ಪ್ರೊಸೆಸರ್‌ಗಳ ಹಿತಾಸಕ್ತಿಗಾಗಿ ಇಂತಹ ಆಮದುಗಳನ್ನು ನಿಯಂತ್ರಿಸುವಂತೆ ಮನವಿ ಮಾಡಲಾಯಿತು.

ಸಚಿವರು Green Army ಎಂಬ ಎನ್‌ಜಿಒಗೂ ಭೇಟಿ ನೀಡಿ, ರೈತ ಸಂಘಟನೆ, ತೆಂಗು ಏರುಗಾರಿಕೆ ತರಬೇತಿ ಹಾಗೂ ಏಕೀಕೃತ ಸಂಸ್ಕರಣಾ ಘಟಕದ ಕಾರ್ಯಗಳನ್ನು ಶ್ಲಾಘಿಸಿದರು.  ತೆಂಗಿನ ಎಣ್ಣೆಯನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಮೂಲಕ ಪೂರೈಕೆ ಮಾಡುವ ಮೂಲಕ ಬೆಲೆ ಸ್ಥಿರತೆ ಸಾಧಿಸಬಹುದು ಎಂಬ ಸಲಹೆಯನ್ನೂ ಈ ವೇಳೆ ಮುಂದಿಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತ್ರಿಶೂರ್ ಜಿಲ್ಲೆಯ ವೇಲೂರು ಮತ್ತು ಪುಳಿಯನ್ನೂರು ಪ್ರದೇಶಗಳಲ್ಲಿ 150 ಹೆಕ್ಟೇರ್‌ನಲ್ಲಿ ಜಾರಿಯಲ್ಲಿರುವ PICCS ಯೋಜನೆಯಡಿ ತೆಂಗಿನ ಜೊತೆಗೆ ಜಾಯಿಕಾಯಿ, ಕಾಳುಮೆಣಸು, ರಾಮ್ಭೂಟಾನ್, ಮ್ಯಾಂಗೋಸ್ಟೀನ್, ಮಾವು, ಹಲಸು, ಬಾಳೆ, ಶುಂಠಿ ಹಾಗೂ ತರಕಾರಿ ಬೆಳೆಗಳನ್ನು ಬೆಳೆಸಲಾಗುತ್ತಿದೆ. ತೆಂಗು ಅಭಿವೃದ್ಧಿ ಮಂಡಳಿ ಕೈಗೊಂಡಿರುವ ಯೋಜನೆಗಳು ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಗುರಿಗೆ ಪೂರಕವಾಗಿವೆ ಎಂದು ಸಚಿವರು ಹೇಳಿದರು. ಇಂತಹ ಯಶಸ್ವಿ ಮಾದರಿಗಳನ್ನು ದೇಶಾದ್ಯಂತ ಅನುಸರಿಸುವ ಅಗತ್ಯವಿದೆ ಎಂದು ಅವರು ಕರೆ ನೀಡಿದರು.

2025–26ರಲ್ಲಿ ಕೇರಳದಲ್ಲಿ 8,300 ಹೆಕ್ಟೇರ್ ಪ್ರದೇಶದಲ್ಲಿ ಈ ಯೋಜನೆ ಜಾರಿಯಾಗಿದ್ದು, ಸುಮಾರು 33,250 ರೈತರಿಗೆ ಲಾಭವಾಗಿದೆ. ದೇಶದ ಪ್ರಮುಖ ತೆಂಗು ಬೆಳೆಯುವ ರಾಜ್ಯಗಳಲ್ಲಿ ಒಟ್ಟು 27,000 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago