Advertisement
ಸುದ್ದಿಗಳು

ಶ್ರೀಲಂಕಾದಿಂದ 2025 ರಲ್ಲಿ ತೆಂಗಿನಕಾಯಿ ರಫ್ತು 1 ಬಿಲಿಯನ್ ಡಾಲರ್ | ಶೇ.40% ರಷ್ಟು ಹೆಚ್ಚಳ

Share

2025ರಲ್ಲಿ ತೆಂಗಿನಕಾಯಿ ಆಧಾರಿತ ರಫ್ತು 1 ಬಿಲಿಯನ್ ಯುಎಸ್ ಡಾಲರ್ ಗಳನ್ನು ಮೀರಿದೆ. 2024 ರಲ್ಲಿ 800 ಮಿಲಿಯನ್ ಯುಎಸ್ ಡಾಲರ್ ಗಳಿತ್ತು.  ಸುಮಾರು  40% ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಈ ಬೆಳವಣಿಗೆ ಶ್ರೀಲಂಕಾದ ತೆಂಗಿನಕಾಯಿ ಉದ್ಯಮಕ್ಕೆ ಒಂದು ಪ್ರಮುಖ ಮೈಲಿಗಲ್ಲು. ಮುಂದಿನ ವಿಸ್ತರಣೆಯು ಎದುರಿಸುತ್ತಿರುವ ಪ್ರಾಥಮಿಕ ಸಮಸ್ಯೆ ಎಂದರೆ ಉತ್ಪಾದಕತೆ. ಇದನ್ನು ಗುರುತಿಸಿದ ಸರ್ಕಾರವು 2025ರಲ್ಲಿ ಬೆಳೆ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ತೆಂಗಿನಕಾಯಿ ಕೃಷಿ ಭೂಮಿಯನ್ನು ವಿಸ್ತರಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿತು. ಆದಾಗ್ಯೂ, ಈ ಕ್ರಮಗಳು ದೀರ್ಘಾವಧಿಯಲ್ಲಿ ಮಾತ್ರ ಫಲಿತಾಂಶಗಳನ್ನು ನೀಡುತ್ತವೆ. 2025 ರಲ್ಲಿ ಲಭ್ಯವಿರುವ ದೇಶಿಯ ಬಳಕೆಯಲ್ಲಿನ  ಬದಲಾವಣೆಯಿಂದ ಬೆಳವಣಿಗೆಯಾಗಿದೆ ಎಂದು ಮತ್ತು ಉದ್ಯಮಶೀಲತಾ ಅಭಿವೃದ್ಧಿ ಸಚಿವ ಚತುರಮಗ ಅಬೇಸಿಂಘೆ ಹೇಳಿದ್ದಾರೆ. ತೆಂಗು ಬೆಳೆಯಲ್ಲಿ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳನ್ನು ಅವರು ವಿವರಿಸಿದರು.

ಮನೆಯಲ್ಲಿ ತೆಂಗಿನಕಾಯಿಯ ಹೆಚ್ಚು ಪರಿಣಾಮಕಾರಿ ಬಳಕೆ,  ದೈನಂದಿನ ಬಳಕೆಗಾಗಿ ಪರ್ಯಾಯ ಉತ್ಪನ್ನಗಳ ಅಳವಡಿಕೆ, ಮನೆಯ ತ್ಯಾಜ್ಯವನ್ನ ಕಡಿಮೆ ಮಾಡಲು ಸರಳ ತಂತ್ರಜ್ಞಾನಗಳ ಬಳಕೆಯನ್ನು ಮಾಡಲಾಗಿತ್ತು. ಅದೇ ಸಮಯದಲ್ಲಿ, ಸರ್ಕಾರವು ತೆಂಗಿನಕಾಯಿ ರಪ್ತುದಾರರು ತೆಂಗಿನ ಹಾಲು ಮತ್ತು ತೆಂಗು ಆಧಾರಿತ ಉತ್ಪನ್ನಗಳನ್ನು ಮರು- ರಫ್ತು ಉದ್ದೇಶಗಳಗಾಗಿ ಮಾತ್ರ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಕನಿಷ್ಠ ಪ್ರಮಾಣದಲ್ಲಿ ಮಾತ್ರ ಆಮದು ಮಾಡಿಕೊಳ್ಳಲಾಗಿದ್ದರೂ, ಈ ಸಕಾಲಿಕ ನೀತಿ ನಿರ್ಧಾರವು ಸ್ಥಳೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿತು ಮತ್ತು ರಪ್ತು ಉದ್ಯಮದ ವೇಗವನ್ನು ಕಾಪಾಡಿತು ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

13 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago