Advertisement
ಸುದ್ದಿಗಳು

ಶ್ರೀಲಂಕಾದಿಂದ 2025 ರಲ್ಲಿ ತೆಂಗಿನಕಾಯಿ ರಫ್ತು 1 ಬಿಲಿಯನ್ ಡಾಲರ್ | ಶೇ.40% ರಷ್ಟು ಹೆಚ್ಚಳ

Share

2025ರಲ್ಲಿ ತೆಂಗಿನಕಾಯಿ ಆಧಾರಿತ ರಫ್ತು 1 ಬಿಲಿಯನ್ ಯುಎಸ್ ಡಾಲರ್ ಗಳನ್ನು ಮೀರಿದೆ. 2024 ರಲ್ಲಿ 800 ಮಿಲಿಯನ್ ಯುಎಸ್ ಡಾಲರ್ ಗಳಿತ್ತು.  ಸುಮಾರು  40% ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಈ ಬೆಳವಣಿಗೆ ಶ್ರೀಲಂಕಾದ ತೆಂಗಿನಕಾಯಿ ಉದ್ಯಮಕ್ಕೆ ಒಂದು ಪ್ರಮುಖ ಮೈಲಿಗಲ್ಲು. ಮುಂದಿನ ವಿಸ್ತರಣೆಯು ಎದುರಿಸುತ್ತಿರುವ ಪ್ರಾಥಮಿಕ ಸಮಸ್ಯೆ ಎಂದರೆ ಉತ್ಪಾದಕತೆ. ಇದನ್ನು ಗುರುತಿಸಿದ ಸರ್ಕಾರವು 2025ರಲ್ಲಿ ಬೆಳೆ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ತೆಂಗಿನಕಾಯಿ ಕೃಷಿ ಭೂಮಿಯನ್ನು ವಿಸ್ತರಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿತು. ಆದಾಗ್ಯೂ, ಈ ಕ್ರಮಗಳು ದೀರ್ಘಾವಧಿಯಲ್ಲಿ ಮಾತ್ರ ಫಲಿತಾಂಶಗಳನ್ನು ನೀಡುತ್ತವೆ. 2025 ರಲ್ಲಿ ಲಭ್ಯವಿರುವ ದೇಶಿಯ ಬಳಕೆಯಲ್ಲಿನ  ಬದಲಾವಣೆಯಿಂದ ಬೆಳವಣಿಗೆಯಾಗಿದೆ ಎಂದು ಮತ್ತು ಉದ್ಯಮಶೀಲತಾ ಅಭಿವೃದ್ಧಿ ಸಚಿವ ಚತುರಮಗ ಅಬೇಸಿಂಘೆ ಹೇಳಿದ್ದಾರೆ. ತೆಂಗು ಬೆಳೆಯಲ್ಲಿ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳನ್ನು ಅವರು ವಿವರಿಸಿದರು.

ಮನೆಯಲ್ಲಿ ತೆಂಗಿನಕಾಯಿಯ ಹೆಚ್ಚು ಪರಿಣಾಮಕಾರಿ ಬಳಕೆ,  ದೈನಂದಿನ ಬಳಕೆಗಾಗಿ ಪರ್ಯಾಯ ಉತ್ಪನ್ನಗಳ ಅಳವಡಿಕೆ, ಮನೆಯ ತ್ಯಾಜ್ಯವನ್ನ ಕಡಿಮೆ ಮಾಡಲು ಸರಳ ತಂತ್ರಜ್ಞಾನಗಳ ಬಳಕೆಯನ್ನು ಮಾಡಲಾಗಿತ್ತು. ಅದೇ ಸಮಯದಲ್ಲಿ, ಸರ್ಕಾರವು ತೆಂಗಿನಕಾಯಿ ರಪ್ತುದಾರರು ತೆಂಗಿನ ಹಾಲು ಮತ್ತು ತೆಂಗು ಆಧಾರಿತ ಉತ್ಪನ್ನಗಳನ್ನು ಮರು- ರಫ್ತು ಉದ್ದೇಶಗಳಗಾಗಿ ಮಾತ್ರ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಕನಿಷ್ಠ ಪ್ರಮಾಣದಲ್ಲಿ ಮಾತ್ರ ಆಮದು ಮಾಡಿಕೊಳ್ಳಲಾಗಿದ್ದರೂ, ಈ ಸಕಾಲಿಕ ನೀತಿ ನಿರ್ಧಾರವು ಸ್ಥಳೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿತು ಮತ್ತು ರಪ್ತು ಉದ್ಯಮದ ವೇಗವನ್ನು ಕಾಪಾಡಿತು ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

27 minutes ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

7 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

16 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

16 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

18 hours ago