Advertisement
ಸುದ್ದಿಗಳು

ಶ್ರೀಲಂಕಾದಿಂದ 2025 ರಲ್ಲಿ ತೆಂಗಿನಕಾಯಿ ರಫ್ತು 1 ಬಿಲಿಯನ್ ಡಾಲರ್ | ಶೇ.40% ರಷ್ಟು ಹೆಚ್ಚಳ

Share

2025ರಲ್ಲಿ ತೆಂಗಿನಕಾಯಿ ಆಧಾರಿತ ರಫ್ತು 1 ಬಿಲಿಯನ್ ಯುಎಸ್ ಡಾಲರ್ ಗಳನ್ನು ಮೀರಿದೆ. 2024 ರಲ್ಲಿ 800 ಮಿಲಿಯನ್ ಯುಎಸ್ ಡಾಲರ್ ಗಳಿತ್ತು.  ಸುಮಾರು  40% ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಈ ಬೆಳವಣಿಗೆ ಶ್ರೀಲಂಕಾದ ತೆಂಗಿನಕಾಯಿ ಉದ್ಯಮಕ್ಕೆ ಒಂದು ಪ್ರಮುಖ ಮೈಲಿಗಲ್ಲು. ಮುಂದಿನ ವಿಸ್ತರಣೆಯು ಎದುರಿಸುತ್ತಿರುವ ಪ್ರಾಥಮಿಕ ಸಮಸ್ಯೆ ಎಂದರೆ ಉತ್ಪಾದಕತೆ. ಇದನ್ನು ಗುರುತಿಸಿದ ಸರ್ಕಾರವು 2025ರಲ್ಲಿ ಬೆಳೆ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ತೆಂಗಿನಕಾಯಿ ಕೃಷಿ ಭೂಮಿಯನ್ನು ವಿಸ್ತರಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿತು. ಆದಾಗ್ಯೂ, ಈ ಕ್ರಮಗಳು ದೀರ್ಘಾವಧಿಯಲ್ಲಿ ಮಾತ್ರ ಫಲಿತಾಂಶಗಳನ್ನು ನೀಡುತ್ತವೆ. 2025 ರಲ್ಲಿ ಲಭ್ಯವಿರುವ ದೇಶಿಯ ಬಳಕೆಯಲ್ಲಿನ  ಬದಲಾವಣೆಯಿಂದ ಬೆಳವಣಿಗೆಯಾಗಿದೆ ಎಂದು ಮತ್ತು ಉದ್ಯಮಶೀಲತಾ ಅಭಿವೃದ್ಧಿ ಸಚಿವ ಚತುರಮಗ ಅಬೇಸಿಂಘೆ ಹೇಳಿದ್ದಾರೆ. ತೆಂಗು ಬೆಳೆಯಲ್ಲಿ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳನ್ನು ಅವರು ವಿವರಿಸಿದರು.

ಮನೆಯಲ್ಲಿ ತೆಂಗಿನಕಾಯಿಯ ಹೆಚ್ಚು ಪರಿಣಾಮಕಾರಿ ಬಳಕೆ,  ದೈನಂದಿನ ಬಳಕೆಗಾಗಿ ಪರ್ಯಾಯ ಉತ್ಪನ್ನಗಳ ಅಳವಡಿಕೆ, ಮನೆಯ ತ್ಯಾಜ್ಯವನ್ನ ಕಡಿಮೆ ಮಾಡಲು ಸರಳ ತಂತ್ರಜ್ಞಾನಗಳ ಬಳಕೆಯನ್ನು ಮಾಡಲಾಗಿತ್ತು. ಅದೇ ಸಮಯದಲ್ಲಿ, ಸರ್ಕಾರವು ತೆಂಗಿನಕಾಯಿ ರಪ್ತುದಾರರು ತೆಂಗಿನ ಹಾಲು ಮತ್ತು ತೆಂಗು ಆಧಾರಿತ ಉತ್ಪನ್ನಗಳನ್ನು ಮರು- ರಫ್ತು ಉದ್ದೇಶಗಳಗಾಗಿ ಮಾತ್ರ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಕನಿಷ್ಠ ಪ್ರಮಾಣದಲ್ಲಿ ಮಾತ್ರ ಆಮದು ಮಾಡಿಕೊಳ್ಳಲಾಗಿದ್ದರೂ, ಈ ಸಕಾಲಿಕ ನೀತಿ ನಿರ್ಧಾರವು ಸ್ಥಳೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿತು ಮತ್ತು ರಪ್ತು ಉದ್ಯಮದ ವೇಗವನ್ನು ಕಾಪಾಡಿತು ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

4 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

9 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

20 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago