Advertisement
MIRROR FOCUS

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

Share

ತೆಂಗು ಬೆಳೆಗಾರರು ಕೂಡಾ ಇಂದು ಧಾರಣೆಯ ಸಂಕಷ್ಟದಲ್ಲಿದ್ದಾರೆ. ಉತ್ಪಾದನಾ ವೆಚ್ಚ ಏರಿಕೆಯಾಗುತ್ತಿದ್ದು, ಅದೇ ಮಾದರಿಯಲ್ಲಿ ಧಾರಣೆ ಏರಿಕೆ ಕಾಣುತ್ತಿಲ್ಲ. ಇನ್ನೊಂದೆಡೆ ಕಾರ್ಮಿಕರ ಕೊರತೆಯೂ ಕಾಡುತ್ತಿದೆ. ಹೀಗಾಗಿ ಸಮಸ್ಯೆಗಳೇ ತೆಂಗು ಬೆಳೆಗಾರರನ್ನು ಆವರಿಸಿಕೊಂಡಿದೆ. ಈ ನಡುವೆ ಪಶ್ಚಿಮ ತಮಿಳುನಾಡಿನ ತೆಂಗು ಬೆಳೆಗಾರರು  ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ತೆಂಗಿನ ಮರ ಏರುವ ನಿಪುಣ ಕಾರ್ಮಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದರಿಂದ ತೆಂಗು ಕೊಯ್ಲು, ಮರ ನಿರ್ವಹಣೆ ಹಾಗೂ ತೋಟದ ಕೆಲಸಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ ತೆಂಗು ಬೆಳೆಯುವ ಪ್ರಮುಖ ಪ್ರದೇಶಗಳಾದ ಕೊಯಮತ್ತೂರು, ತಿರುಪ್ಪೂರು, ಈರೋಡ್ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾರ್ಮಿಕರ ಲಭ್ಯತೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಯುವಕರು ಕೃಷಿ ಕಾರ್ಮಿಕ ವೃತ್ತಿಯಿಂದ ದೂರ ಸರಿಯುತ್ತಿರುವುದು ಮತ್ತು ಇತರ ಉದ್ಯೋಗಗಳತ್ತ ಮುಖ ಮಾಡುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಂದು ಕಾಲದಲ್ಲಿ ಸುಲಭವಾಗಿ ದೊರೆಯುತ್ತಿದ್ದ ತೆಂಗು ಮರ ಏರುವ ಪರಿಣಿತ ಕಾರ್ಮಿಕರು ಈಗ ವಿರಳವಾಗಿದ್ದು, ಅವರ ಕೂಲಿ ದರಗಳು ಹಲವು ಪಟ್ಟು ಏರಿಕೆಯಾಗಿದೆ. ಇದರಿಂದ ತೆಂಗು ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದು, ರೈತರ ಲಾಭದಾಯಕತೆ ಕುಸಿಯುತ್ತಿದೆ.

ಕೃಷಿ ತಜ್ಞರ ಪ್ರಕಾರ, ಕಾರ್ಮಿಕ ಕೊರತೆಯನ್ನು ನಿವಾರಿಸಲು ಯಾಂತ್ರೀಕೃತ ತೆಂಗು ಮರ ಏರುವ ಉಪಕರಣಗಳು, ರೈತರಿಗೆ ತರಬೇತಿ ಹಾಗೂ ಗ್ರಾಮೀಣ ಯುವಕರನ್ನು ಈ ವೃತ್ತಿಯತ್ತ ಆಕರ್ಷಿಸುವ ಕಾರ್ಯಕ್ರಮಗಳ ಅಗತ್ಯವಿದೆ. ಇಲ್ಲದಿದ್ದರೆ ಭವಿಷ್ಯದಲ್ಲಿ ತೆಂಗು ಕ್ಷೇತ್ರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ತೆಂಗು ಬೆಳೆಯುವ ಭಾಗಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಕಾಣಿಸಿಕೊಳ್ಳುತ್ತಿದೆ. ಕಾರ್ಮಿಕರ ಕೊರತೆ, ಹೆಚ್ಚುತ್ತಿರುವ ಕೂಲಿ ದರಗಳು ಮತ್ತು ನಿರ್ವಹಣಾ ವೆಚ್ಚಗಳು ತೆಂಗು ಬೆಳೆಗಾರರ ಪ್ರಮುಖ ಸಮಸ್ಯೆಗಳಾಗಿ ಪರಿಣಮಿಸಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Coconut farmers in western Tamil Nadu are facing rising cultivation costs due to a severe shortage of skilled labour, especially coconut tree climbers. Increasing wages and declining availability of agricultural workers are affecting farm profitability, prompting calls for mechanization and skill development initiatives.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

4 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

4 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

5 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

7 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

19 hours ago