Advertisement
ಸುದ್ದಿಗಳು

ತೆಂಗಿನ ಕಾಯಿ ಸಿಪ್ಪೆಯಿಂದ ತಯಾರಾಗುತ್ತೆ ಉತ್ಕೃಷ್ಟ ಗೊಬ್ಬರ | ಸುಮ್ಮನೆ ಕಸ ಎಂದು ಸುಟ್ಟು ಬಿಡಬೇಡಿ | ತ್ಯಾಜ್ಯ ನೀಡುತ್ತೆ ಉತ್ತಮ ಪೋಷಕಾಂಶ

Share

ಕರಾವಳಿ ಜನರ ಜೀವನ ಶೈಲಿಯೇ ವಿಶೇಷ. ಇಲ್ಲಿನ ಸಂಸ್ಕೃತಿ, ಜೀವನ ಕ್ರಮ, ಭಾಷೆ ಎಲ್ಲವೂ ವೈವಿಧ್ಯತೆಯಿಂದ ಕೂಡಿದೆ. ಇನ್ನು ಕೃಷಿ ಕಡೆ ಬಂದ್ರೆ ಭತ್ತ ಪ್ರಧಾನ ಬೆಳೆಯಾಗಿತ್ತು. ಕಾಲ ಸರಿದಂತೆ ಅಡಿಕೆ ವಾಣಿಜ್ಯ ಬೆಳೆಯಾಗಿ ಇಡೀ ಕರಾವಳಿಯನ್ನು ಪಸರಿಸಿತು. ಅದರ ಜೊತೆಗೆ ತೆಂಗು, ರಬ್ಬರ್, ಕಾಳು ಮೆಣಸು, ಬಾಳೆ, ಕೋಕೋ.. ಹೀಗೆ ಒಂದಾ… ಎರಡ…. ಅಡಿಕೆ ಇಲ್ಲದೆ ಜೀವನ ಸಾಗಬಹುದು.. ಆದರೆ ಮನೆಗೆ ಎರಡಾದ್ರು ತೆಂಗಿನ ಮರ ಇಲ್ಲಾಂದ್ರೆ ಭಾರಿ ಕಷ್ಟ. ಮಾರಟಕ್ಕೆ ಅಲ್ಲದಿದ್ರು ಅಡುಗೆಗೆ ತೆಂಗಿನಕಾಯಿ ಬೇಕೇ ಬೇಕು. ಒಂದು ಗಡಿ ತೆಂಗಿನ ಕಾಯಿ ತುರಿ ಇದ್ರೆನೆ ನಮ್ಮ ಮನೆಯಲ್ಲೆಲ್ಲ ಸಾರು, ಗಸಿ, ಪಲ್ಯ..

ತೆಂಗಿನ ಕಾಯಿ ಸಿಪ್ಪೆ, ಗೆರಟೆ, ದಂಡು, ಗರಿ ಇಲ್ಲಾಂದ್ರೆ ಅಂಡೆ ಒಲೆನೂ ಹೊಗೆಯಡ್ತಾ ಇರ್ತದೆ. ಒಲೆಗೆ ಎರಡು ತೆಂಗಿನ ಸಿಪ್ಪೆ, ಗೆರಟೆ ಹಾಕಿದ್ರೆನೆ ನೀರು ಕಾಯೋದು. ಎಷ್ಟೇ ತೆಂಗಿನ ಮರ ಇರ್ಲಿ. ಹೆಚ್ಚಿನವರ ಮನೆಯಲ್ಲಿ ಅದರ ಕಸ ಸೇರೋದು ಒಲೆ ಉರಿಗೆ. ಇತ್ತೀಚೆಗೆ ಕೆಲವರು ತೆಂಗಿನ ಮರದ ತ್ಯಾಜ್ಯದಿಂದ ಗೊಬ್ಬರ ಮಾಡುವುದನ್ನು ಕಲಿತಿದ್ದಾರೆ. ಇಲ್ಲದಿದ್ರೆ ಬಹುಪಾಲು ಸೇರ್ತಿದ್ದಿದ್ದು ಒಲೆ ಉರಿಸಲು.. ಇಲ್ಲಾಂದ್ರೆ ಸುಡು ಮಣ್ಣು ಮಾಡಲು.

ತೆಂಗಿನ ಸಿಪ್ಪೆಯಿಂದ ಬಹಳ ಮೌಲ್ಯವರ್ಧಿತವಾದ ಗೊಬ್ಬರ ಮಾಡಲು ಸಾಧ್ಯ. ಇದು ಗಿಡಗಳಿಗೆ ಬಹಳ ಪೋಷಾಕಾಂಶವನ್ನು ನೀಡುತ್ತದೆ. ಈ ಬಗ್ಗೆ ಕೃಷಿ ತಜ್ಞರಾದ ಎಲ್ ಸಿ ನಾಗರಾಜ್ ಅವರು ಬಹಳ ಸಂಕ್ಷಿಪ್ತವಾಗಿ ವಿವರಿಸುತ್ತಾರೆ.

ತೆಂಗಿನಕಾಯಿ ಸುಲಿದುಕೊಂಡ ಮೇಲೆ ಉಳಿಯುವ ಜುಂಗನ್ನು ಸಾಮಾನ್ಯವಾಗಿ ಸುಟ್ಟು ಹಾಕಲಾಗುತ್ತದೆ ಇಲ್ಲವೇ ತೆಂಗಿನ ಬೆಳೆಗಾರರು ಇದನ್ನು ಬೇಕರಿಗಳಿಗೆ ಮಾರಿಬಿಡುತ್ತಾರೆ. ಬೇಕರಿ ಇಲ್ಲದ ಕಡೆ ಸುಮ್ಮನೆ ಕಸ ಎಂದು  ಬೆಂಕಿ ಹಚ್ಚಿ ಬಿಡುವ ಚಾಳಿ ಚಾಲ್ತಿಯಲ್ಲಿದೆ. ಸುಟ್ಟಾಗ ಬಿಡುಗಡೆಯಾಗುವ ಕಾರ್ಬನ್ ಡಯಾಕ್ಸೈಡು ವಾತಾವರಣದ ತಾಪಮಾನವನ್ನು ಹೆಚ್ಚಿಸುತ್ತಿರುವ ಗ್ರೀನ್ ಹೌಸ್ ಗ್ಯಾಸುಗಳ ಪೈಕಿ ಒಂದು.

ಆದರೆ ತೆಂಗಿನ ಕಾಯಿಯ ಜುಂಗಿನಿಂದ ತಯಾರಿಸಲಾಗುವ ಗೊಬ್ಬರ ಸಸ್ಯಗಳಿಗೆ ಬೇಕಾಗಿರುವ ಪೋಷಕಗಳ ಅಗರ, ತೆಂಗಿನ ಜುಂಗಿನಿಂದ ತಯಾರಿಸುವ ಗೊಬ್ಬರದಲ್ಲಿರುವ ತಾಮ್ರ ಸಸ್ಯಗಳ ಪೋಷಕಾಂಶ ಸಂಯೋಜ‌ನೆಯಲ್ಲಿ ಪ್ರೊಟೀನು  ವೇಗವರ್ಧಕವಾಗಿ ವರ್ತಿಸುತ್ತದೆ. ಎಲೆಕ್ಟ್ರಾನುಗಳ ವರ್ಗಾವಣೆ, ವಿನಿಮಯ ಕ್ರಿಯೆಯಲ್ಲಿ ಮುಖ್ಯ ಪಾತ್ರ ವಹಿಸುವ ತಾಮ್ರವು ಪೋಷಕಾಂಶ ಬಹುಪಟಲದಲ್ಲಿ(Broad spectrum of Soil nutrients) ಕಿರು ಪೋಷಕಾಂಶಗಳ ಗುಂಪಿಗೆ ಸೇರಿದ್ದು, ಆಮ್ಲೀಯವಾದ ಮಣ್ಣುಗಳಲ್ಲಿ, ಅಂದರೆ ಮಣ್ಣಿನ ರಸಸಾರ 7.2 ಗಿಂತ ಕಡಿಮೆ ಇರುವ ಮಣ್ಣುಗಳಲ್ಲಿ ಉಂಟಾಗುವ ತಾಮ್ರದ ಕೊರತೆಯ ದೆಸೆಯಿಂದ ಸಸ್ಯದ ಎಲೆಗಳ ಒಳಗಿನ ನಾರಿನಂತ ನಾಳಗಳು ಹಳದಿ ಬಿಳುಚಿಕೊಂಡು ಕ್ಲೋರೊಸಿಸ್ ರೋಗ ಕಾಣಿಸಿಕೊಳ್ಳುತ್ತದೆ.

ತೆಂಗಿನ ಕಾಯಿ ಸುಲಿದ ಮೇಲೆ ಉಳಿಯುವ ಜುಂಗನ್ನು ನೆರಳಿನಲ್ಲಿ ರಾಶಿ ಹಾಕಿ ಅದರ ಮೇಲೆ ಜಾನುವಾರುಗಳ ಸಗಣಿ ಮತ್ತು ಗಂಜಲದ ತೆಳು ಬಗ್ಗಡವನ್ನು 15 ದಿನಕ್ಕೆ ಒಮ್ಮೆ ಸಿಂಪಡಿಸಿದರೆ, ನಾಲ್ಕು ಸಿಂಪಡಣೆ ಮುಗಿಯುವಾಗ್ಗೆ, ಅಂದರೆ 60 ದಿನಗಳಲ್ಲಿ ಪೋಷಕ ಸಮೃದ್ದವಾದ ಜುಂಗಿನ ಗೊಬ್ಬರ ಸಿಗುತ್ತದೆ. ಈ ಗೊಬ್ಬರವನ್ನು ಆಮ್ಲೀಯ ಮಣ್ಣನ್ನು ಸುಧಾರಿಸಲು ಬಳಸಬಹುದು.

ತೆಂಗಿನ ಜುಂಗು ಗೊಬ್ಬರದ ಇತರೆ ಪ್ರಯೋಜನ ಎಂದರೆ ಇದು ಮಣ್ಣಿನ ತೇವಾಂಶ ಧಾರಣ ಚೈತನ್ಯವನ್ನು ಹೆಚ್ಚಿಸಿ ಬೇಸಗೆಯಲ್ಲಿ ನೀರಾವರಿಯ ಆವರ್ತನೆ (Irrigation frequency) ಯನ್ನು ಗಣನೀಯವಾಗಿ ತಗ್ಗಿಸುತ್ತದೆ. ಈ ತೆಂಗಿನ ಜುಂಗನ್ನು ಗಿಡಗಳ ಬುಡದಲ್ಲಿ ಹರಡಿ ಅದರ ಮೇಲೆ ಆಗಾಗ ಜಾನುವಾರುಗಳ ತೆಳು ಸಗಣಿ ಹರಡಿದರೂ ಸಸ್ಯಗಳ ಕ್ಲೋರೋಸಿಸ್ ರೋಗ ಗುಣವಾಗುತ್ತದೆ.

ಮನೆಯ ಮುಂಭಾಗದಲ್ಲಿ ಬೆಳೆದಿರುವ ಗಿಡಗಳ ಪಾತಿಯಲ್ಲಿ   ತೆಂಗಿನ ಜುಂಗನ್ನು ಕಂತೆ ಕಟ್ಟಿ ಇಟ್ಟು ನೀರು ಹಾಕಿದರೆ 5 ದಿನಗಳ ಕಾಲ ತೇವ ಆರದಂತಿರುತ್ತದೆ. ತೆಂಗಿನ ಒತ್ತೊತ್ತಾದ ಜುಂಗಿನಲ್ಲಿ ಮೈಲ್ಮೈ ಒತ್ತಡ (Surface tension) ಇರುವುದರಿಂದ ವಾತಾವರಣದ ತಾಪಮಾನಕ್ಕೆ ತೇವ ಆವಿಯಾಗದಂತೆ ಉಳಿಯುತ್ತದೆ.

ಮೈಲ್ಮೈ ಒತ್ತಡ(Surface tension)   ಎಂದರೆ :

ಹಸಿಯಾದ ಹಂಚಿಕಡ್ಡಿಯನ್ನು ತೆಗೆದುಕೊಂಡ ಅದನ್ನು ಮೂರು ಮೂಲೆಗಳಿರುವಂತೆ ತ್ರಿಕೋನಾಕಾರವಾಗಿ ಮಡಿಚಿ, ಮಡಿಕೆಯ ನಡುವಿನ ತೆರವು ಸಂಕುಚಿತವಾದಷ್ಟೂ ಮೇಲ್ಮೈ ಒತ್ತಡ ಜಾಸ್ತಿ , ಎಷ್ಟು ಸಂಕುಚಿತವಾಗಿ ಸಾಧ್ಯವೋ ಅಷ್ಟು ತೆರವು ಇರುವಂತೆ ಮಡಿಚಿ ನೀರಿನಲ್ಲಿ ಅದ್ದಿ ಹೊರತೆಗೆಯಿರಿ; ನೀರಿನ ತೆಳುಪೊರೆಯೊಂದು ತ್ರಿಕೋನದ ನಡುವೆ ಬಂಧಿಯಾಗುತ್ತದೆ ; ಇದೇ ಮೇಲ್ಮೈ ಒತ್ತಡ. ತೆಂಗಿನ ಜುಂಗು ಒತ್ತೊತ್ತಾಗಿ ಹೆಣಿಗೆಯಾಗಿರುವುದರಿಂದ ಇದನ್ನು ಮಣ್ಣಿಗೆ ಬೆರೆಸಿದಾಗ ಮಣ್ಣಿನ ತೇವಾಂಶ ಧಾರಣೆ ಚೈತನ್ಯ ಸುಧಾರಿಸುತ್ತದೆ . ತೆಂಗಿನ ಜುಂಗನ್ನು ಸುಡಬೇಡಿ, ಸುಡುವವರಿಗೆ ಮಾರಿಬಿಡಬೇಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

11 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

19 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago