Advertisement
MIRROR FOCUS

ಕರೆ ಬಂದಲ್ಲಿಗೆ ತೆರಳಿ ತೆಂಗು ಕೊಯ್ಲು | ದ ಕ ಜಿಲ್ಲೆಯಲ್ಲಿ ಆರಂಭವಾಗಲಿದೆ ತೆಂಗು ಕೊಯ್ಲು ಟೀಂ | ವಿಟ್ಲದ ಪಿಂಗಾರ ರೈತ ಉತ್ಪಾದಕ ಕಂಪನಿಯಿಂದ ಹೊಸ ಹೆಜ್ಜೆ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ತೆಂಗು ಬೆಳೆಗಾರರಿಗೆ ಪಾಸಿಟಿವ್‌ ಸುದ್ದಿಯೊಂದು ಬರುತ್ತಿದೆ. ವಿಟ್ಲದ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿ (FPO) ತೆಂಗು ಬೆಳೆಗಾರರಿಗೆ ನೆರವಿಗೆ ಬರುತ್ತಿದೆ. ಕರೆ ಬಂದಲ್ಲಿಗೆ ತೆರಳಿ ತೆಂಗು ಕೊಯ್ಲು ಮಾಡುವ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಜ.2 ರಿಂದ ಈ ಕೆಲಸ ಆರಂಭವಾಗಲಿದೆ. 

ಬಂಟ್ವಾಳ ತಾಲೂಕು ವಿಟ್ಲದಲ್ಲಿರುವ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯು ಈಗಾಗಲೇ ವಿವಿಧ ಕಾರ್ಯಗಳ ಮೂಲಕ ಗಮನ ಸೆಳೆದಿದೆ. ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸುವ ಪಿಂಗಾರ ತಂಡವು ಈಗಾಗಲೇ ಅಡಿಕೆ ಕೊಯ್ಲು ತಂಡವನ್ನು ರಚಿಸಿದೆ. ಈ ಮೂಲಕ ಅನೇಕ ಕೃಷಿಕರಿಗೆ ನೆರವಾಗಿದೆ. ಅಡಿಕೆ ಕೊಯ್ಲು, ಔಷಧಿ ಸಿಂಪಡಣೆಯ ಬಹುಪಾಲು ಸಮಸ್ಯೆಯನ್ನು ನಿವಾರಣೆ ಮಾಡಿದೆ.ಕಳೆದ ವರ್ಷ ಈ ಸಂಸ್ಥೆ ಪೈಬರ್‌ ದೋಟಿಯ ಮೂಲಕ ಅಡಿಕೆ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮೂಲಕ  10 ತಿಂಗಳಲ್ಲಿ ಸುಮಾರು 30 ಲಕ್ಷ ವ್ಯವಹಾರ ನಡೆಸಿದೆ. ಅಷ್ಟೂ ರೈತರಿಗೆ ಸಹಾಯ ಮಾಡಿದೆ. ಇದೀಗ ಈ ಸಂಸ್ಥೆ ತೆಂಗು ಬೆಳೆಗಾರರಿಗೂ ನೆರವಾಗುತ್ತಿದೆ. ಅದೇ ಮಾದರಿಯಲ್ಲಿ ತಂಡವನ್ನು ರಚನೆ ಮಾಡುತ್ತಿದೆ. ಕರೆದಲ್ಲಿಗೆ ಹೋಗಿ ತೆಂಗು ಕೊಯ್ಲು ಮಾಡುವ ಯೋಜನೆಯನ್ನು ಸಿದ್ಧಪಡಿಸಿದೆ. ಕೇರಳದಲ್ಲಿ ಹಲೋ ನಾರಿಯಲ್‌ ತಂಡ ಈ ಮಾದರಿಯ ಕೆಲಸ ಮಾಡುತ್ತಿದ್ದು, ಈಚೆಗೆ ಕಾಸರಗೋಡು ಜಿಲ್ಲೆಯ ನೀರ್ಚಾಲಿನಲ್ಲೂ ಕೆಲಸ ಆರಂಭ ಮಾಡಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಂಗಾರ ಸಂಸ್ಥೆ ತೆಂಗು ಬೆಳೆಗಾರರಿಗೆ ನೆರವಾಗುತ್ತಿದೆ. ಈ ಪ್ರಯತ್ನ ರಾಜ್ಯದಲ್ಲೇ ಪ್ರಥಮ ಎನಿಸಿದೆ.

ಪಿಂಗಾರ ಸಂಸ್ಥೆಗೆ ಕರೆ ಮಾಡಿ ರೈತರು ಕೊಯ್ಲಿಗೆ ದಿನ ನಿಗದಿ ಮಾಡಬೇಕು. ನಿಗದಿತ ದಿನದಂದು ನಾಲ್ವರು ಕಾರ್ಮಿಕರ ಜೊತೆ ಓರ್ವ ಮ್ಯಾನೇಜರ್‌ ಓಮ್ನಿ ವಾಹನದಲ್ಲಿ ತೋಟಕ್ಕೇ ಬಂದು ತೆಂಗಿನ ಕೊನೆಗಳನ್ನು ಕತ್ತಿಯಿಂದ ಕಡಿದು ಕೊಡುತ್ತಾರೆ. ಒಂದು ಮರದ ಕೊಯ್ಲಿಗೆ 50 ರು. ನಿಗದಿಪಡಿಸಲಾಗಿದೆ. ಕನಿಷ್ಠ, ಗರಿಷ್ಠ ಮರಗಳ ಸಂಖ್ಯೆಯ ಮಿತಿ ಇಲ್ಲ, ಕರೆ ಬಂದಲ್ಲಿಗೆ ತೆರಳಿ ವರ್ಷಪೂರ್ತಿ ತಂಡ ಕಾರ್ಯಾಚರಿಸಲಿದೆ ಎಂದು ಹೇಳುತ್ತಾರೆ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

14 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

16 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago