ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

November 14, 2024
2:22 PM
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.


Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror