ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

November 14, 2024
2:22 PM
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.


Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror