MIRROR FOCUS

ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

Advertisement
Advertisement

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.

 
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

6 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

8 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

12 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

12 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

13 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago