Advertisement
MIRROR FOCUS

ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

Share

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.

 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

17 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago