ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.
ಸೆಪ್ಟಂಬರ್ ಹಾಗೂ ಅಕ್ಟೋಬರ್ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.
ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.
ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…