MIRROR FOCUS

ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

Advertisement
Advertisement

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.

 
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

5 minutes ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

10 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

18 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

24 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago