ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.
ಸೆಪ್ಟಂಬರ್ ಹಾಗೂ ಅಕ್ಟೋಬರ್ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.
ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.
ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…