Advertisement
MIRROR FOCUS

ತೆಂಗಿನಕಾಯಿಗೆ ಮತ್ತೆ ಧಾರಣೆ ಏರಿಕೆ | 50 ರೂಪಾಯಿ ದಾಟಿದ ಧಾರಣೆ |

Share

ತೆಂಗಿನಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ ಕಂಡುಬಂದಿದೆ. ಕೆಲವು ಸಮಯಗಳ ಹಿಂದೆ ಕೆಜಿಗೆ 50 ರೂಪಾಯಿ ತಲಪಿದ್ದ ಧಾರಣೆ ಇದೀಗ ಮತ್ತೆ 50 ರೂಪಾಯಿ ತಲಪಿದೆ. ಸದ್ಯ ಹಸಿ ತೆಂಗಿನಕಾಯಿಗೆ 49 ರೂಪಾಯಿ ಹಾಗೂ ಒಣ ತೆಂಗಿನಕಾಯಿಗೆ 50 ರೂಪಾಯಿಗೆ ಖರೀದಿ ನಡೆದಿದೆ.

ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ಸುಮಾರಿಗೆ ಕೆಜಿಗೆ 40-50 ರೂಪಾಯಿ ಆಸುಪಾಸಿನಲ್ಲಿದ್ದ ತೆಂಗಿನ ಕಾಯಿ ಮಾರುಕಟ್ಟೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ. ಕೇರಳದಲ್ಲೂ ಧಾರಣೆ ಏರಿಕೆ ಕಂಡಿದೆ. ಗ್ರಾಹಕರಿಗೆ 60-65 ರೂಪಾಯಿಗೆ ಮಾರಾಟವಾಗುತ್ತಿದೆ. ಕರ್ನಾಟಕ,ಕೇರಳ ಹಾಗೂ ತಮಿಳುನಾಡಿನಲ್ಲಿ ತೆಂಗಿನ ಬೆಳೆ ಹೆಚ್ಚು ಇರುವ ಪ್ರದೇಶವಾಗಿದೆ. ಈ ಮೂರು ರಾಜ್ಯಗಳಲ್ಲೂ ತೆಂಗಿನ ಇಳುವರಿ ಕಡಿಮೆಯಾಗಿದೆ. ಈ ಬಾರಿಯ ಬೇಸಗೆಯಲ್ಲಿ ಎಳನೀರು ಮಾರಾಟ ಹೆಚ್ಚಾಗಿದೆ. ಈ ಕಾರಣದಿಂದ ತೆಂಗಿನ ಕಾಯಿ ಇಳುವರಿ ಕಡಿಮೆಯಾಗಿದೆ. ಪ್ರಸುತ್ತ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ತೆಂಗಿನ ಕಾಯಿಗಳ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಕಂಡಿದೆ.

ಈಗಾಗಲೇ ತಾಪಮಾನ ಏರಿಕೆ ಇರುವುದರಿಂದ ಎಳನೀರಿಗೂ ಬೇಡಿಕೆ ಇದೆ. ಹೀಗಾಗಿ ಎಳನೀರು ಧಾರಣೆಯೂ ಏರಿಕೆಯಾಗಿದೆ. ಎರಡು ತಿಂಗಳಿನಿಂದಲೇ ಎಳನೀರಿಗೆ ಬೇಡಿಕೆ ಇದೆ. ಈ ಕಾರಣದಿಂದ 40-45 ರೂಪಾಯಿ ಇದ್ದ ಧಾರಣೆ ಈಗ 50 ರೂಪಾಯಿ ತಲಪಿದೆ. ಇದರ ಜೊತೆಗೇ ತೆಂಗಿನಕಾಯಿಗೂ ಧಾರಣೆ ಏರಿಕೆಯಾಗಿದೆ.

ಇನ್ನು ತೆಂಗಿನಕಾಯಿಗೆ ಬೇಡಿಕೆಯ ಸಮಯ. ಶಬರಿಮಲೆ ಯಾತ್ರಿಕರು ಸೇರಿದಂತೆ ಹಲವು ಹಬ್ಬಗಳು ಮುಂದಿನ ದಿನಗಳಲ್ಲಿ ಇರಲಿದೆ. ಬೇರೆ ರಾಜ್ಯಗಳಿಂದಲೂ ತೆಂಗಿನಕಾಯಿ ತರಿಸಿಕೊಳ್ಳುವಷ್ಟು ಬೆಳೆಯೂ ಕಡಿಮೆ ಇದೆ. ಹೀಗಾಗಿ ಈ ಪೂರೈಕೆಯ ಕೊರತೆಯು ಮುಂದಿನ ಒಂದೆರಡು ತಿಂಗಳು ಇರುವ ಸಾಧ್ಯತೆ ಇದೆ.

 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 hour ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

15 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

19 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago