ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದ್ದುತರಬೇತಿಯ ಪ್ರಗತಿ ಪರಿಶೀಲನ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಮತ್ತು ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರ್ ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…