ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದ್ದುತರಬೇತಿಯ ಪ್ರಗತಿ ಪರಿಶೀಲನ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಮತ್ತು ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರ್ ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…