Advertisement
ಸುದ್ದಿಗಳು

ಜನಪ್ರಿಯವಾಗುತ್ತಿರುವ ಕಾಫಿ ಬೆಳೆ | ಚಿಕ್ಕಮಗಳೂರಿನ ಕಾಫಿ ಮ್ಯೂಸಿಯಂ

Share

ಕಾಫಿ ನಾಡು ಚಿಕ್ಕಮಗಳೂರು, ಜಗತ್ತಿನ ಉತ್ಕೃಷ್ಟ ಕಾಫಿ ಬೆಳೆಯುವ ಪ್ರದೇಶಗಳಲ್ಲೊಂದು.ಕೇಂದ್ರ ಸರ್ಕಾರಿ ಸ್ವಾಮ್ಯದ ಕಾಫಿ ಬೋರ್ಡ್ ವತಿಯಿಂದ ಆರಂಭಗೊಂಡಿರುವ ಕಾಫಿ ಮ್ಯೂಸಿಯಂ ಕಾಫಿ ಪ್ರಿಯರನ್ನು, ಬೆಳೆಗಾರರನ್ನು ತನ್ನತ್ತ  ಸೆಳೆಯುತ್ತಿದೆ.

ಮಲೆನಾಡ ತವರೂರು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಕಚೇರಿ ಬಳಿ ಕಾಫಿ ಮ್ಯೂಸಿಯಂ ತೆರೆದಿದ್ದು, ಇಲ್ಲಿ ಚಿಕ್ಕಮಗಳೂರಿಗೆ ಕಾಫಿ ಪರಿಚಯವಾಗಿದ್ದು ಹೇಗೆ ಎಂಬುದರಿಂದ ಹಿಡಿದು ಜಿಲ್ಲೆಯ ಹೆಗ್ಗುರುತಾಗುವ ಮಟ್ಟಿಗೆ ಸಾಧಿಸಿರುವ ಬೆಳವಣಿಗೆ ಕುರಿತು ಆಸಕ್ತಿದಾಯಕ ಮಾಹಿತಿ ಒದಗಿಸುತ್ತಿದೆ. ಇದಷ್ಟೇ ಅಲ್ಲದೆ, ಇಲ್ಲಿ ಕಾಫಿ ಬೀಜ ಸಂಸ್ಕರಿಸುವ ವಿಧಾನಗಳು, ಜಗತ್ತಿನ ವಿವಿಧ ಮಾದರಿಯ ಕಾಫಿಯ ಬಗ್ಗೆಯೂ ಅಮೂಲ್ಯ ಮಾಹಿತಿ ಪಡೆಯಬಹುದಾಗಿದೆ.

ಚಿಕ್ಕಮಗಳೂರು ಕಾಫಿ ಬೋರ್ಡ್ ಉಪನಿರ್ದೇಶಕ ವೆಂಕಟ ರೆಡ್ಡಿ, ಇತರೆ ಭಾಗಗಳಲ್ಲಿನ ಕಾಫಿ ಮ್ಯೂಸಿಯಂಗಿಂತ ಇದು ಭಿನ್ನವಾಗಿದೆ.  ಇಲ್ಲಿ ಕಾಫಿ ಬೆಳೆಯುವುದರಿಂದ ಹಿಡಿದು, ವಿವಿಧ ಹಂತಗಳನ್ನು ವಿವರಿಸಲಾಗುತ್ತದೆ ಎಂದು ಹೇಳುತ್ತಾರೆ.

ಕಾಫಿ ಪ್ರಕ್ರಿಯೆ ಕುರಿತ ಮಾಹಿತಿ ಒದಗಿಸುವುದರ ಜತೆಗೆ ಪ್ರವಾಸಿಗರಿಗೆ ಇಲ್ಲಿ ಕಾಫಿಯ ಸ್ವಾದ ಸವಿಯಲು  ಅವಕಾಶ ದೊರೆಯುತ್ತದೆ ಎನ್ನುತ್ತಾರೆ ಕಾಫಿ ಮ್ಯೂಸಿಯಂ ಉದ್ಯೋಗಿ ಚಂದನಾ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

22 minutes ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

36 minutes ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

2 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

8 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago