Advertisement
ಪ್ರಮುಖ

ಕಾಫಿನಾಡಿಗೆ ಕಾಫಿ ಸರಬರಾಜು..! | ಶಿರಸಿಯಿಂದ ಚಿಕ್ಕಮಗಳೂರಿಗೆ ಕಾಫಿ ಸರಬರಾಜು ಮಾಡ್ತಿರೋ ಕೃಷಿಕ | ಕಾಫಿಗೆ ಕಾಫಿ ಕುಡಿಸಿದ್ದು ಯಾರು..?

Share

ಸೂರ್ಯನಿಗೆ ಟಾರ್ಚ್‌ ಹಾಕ್ತಿರಾ ಅನ್ನೋ ಮಾತು ನೀವು ಕೇಳಿರಬಹುದು. ಇಲ್ಲಿ ಅದೇ ಕತೆ ಆಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಕಾಫಿ ಸಪ್ಲೈ ಮಾಡ್ತಿದ್ದಾರೆ ಇಲ್ಲೊಬ್ಬ ಕೃಷಿಕ. ಅದು ಕರಾವಳಿಯ ಶಿರಸಿಯಿಂದ. ಹೌದು, ಆಶ್ಚರ್ಯ ಆದ್ರೂ ಇದು ನಿಜ. ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಫಿ ಘಮಲು ಜೋರಾಗಿದೆ. ಕಾಫಿ (Coffee) ಈ ಮಲೆನಾಡಿಗೆ ಹೊಸತಲ್ಲ. ಹಿಂದೊಮ್ಮೆ ಕಾವೇರಿ ಕಾಫಿ ತಳಿ ಇತ್ತು, ನಂತರ ಹೋಯಿತು. ಇದೀಗ ಟನ್‌ಗಟ್ಟಲೆ ಕಾಫಿಯನ್ನು ಬೆಳೆಯುವ ಪ್ರಯತ್ನವನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ಗಡಿ ಕೈ ಮೂಲದ ರಾಮಚಂದ್ರ ಹೆಗಡೆಯವರು ಮಾಡಿದ್ದಾರೆ.

20 ಎಕರೆ ಪ್ರದೇಶದಲ್ಲಿ ಕಾಫಿ ಬೆಳೆ: ಮಲೆನಾಡ ಹೆಬ್ಬಾಗಿಲಾದ ಶಿರಸಿಗೆ ಹೆಜ್ಜೆ ಇಡುವ ಮುನ್ನ ಮಲೆನಾಡಿನ ಸೆರಗಾದ ಮುಂಡಗೋಡನ್ನು ದಾಟಬೇಕು. ಈ ಮುಂಡಗೋಡಿಂದ 30 ಕಿಲೋಮೀಟರ್ ದೂರದ ತಾಲೂಕಿನ ಮಳಗಿ ಗ್ರಾಮದಲ್ಲಿ ಕಾಫಿಯನ್ನು ಉಪಬೆಳೆಯಾಗಿ ಪ್ರಯತ್ನಿಸಿದ ಇವರು, ಈಗ ಅರೇಬಿಕ್ ಹಾಗೂ ರೊಬಸ್ಟಾ ಎರಡು ತಳಿಯನ್ನು 20 ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಕೇದಾರ ತೋಟ ಎಂಬ ಪ್ರದೇಶದಲ್ಲಿ ಬೆಳೆಯಲಾಗುತ್ತಿರುವ ಈ ಬೆಳೆಯು ಈಗ ಕಾಫಿ ಹಬ್ ಆದ ಚಿಕ್ಕಮಗಳೂರನ್ನು ತಲುಪುತಿದೆ.

ಚಿಕ್ಕಮಗಳೂರಿಗೆ ಕಾಫಿ ಸರಬರಾಜು: ಇಲ್ಲಿನ ವಾತಾವರಣಕ್ಕೆ ಕಾಫಿ ಚೆನ್ನಾಗಿ ಒಗ್ಗುತ್ತಿದ್ದು ಅಧಿಕ ಇಳುವರಿಯನ್ನು ನೀಡುತ್ತಿದೆ, ಇನ್ನೊಂದು ವಿಶೇಷವೇನೆಂದರೆ ಇಲ್ಲಿನ ಕಾಫಿಯನ್ನು ಕದಂಬ ಮಾರ್ಕೆಟಿಂಗ್ ಸೊಸೈಟಿ ಮೂಲಕ ಚಿಕ್ಕಮಗಳೂರಿನ ಮೂಲದ ಕಂಪೆನಿಗಳು ಖರೀದಿಸುತ್ತವಂತೆ. ಕಾಫಿನಾಡಿಗೇ ಕಾಫಿ ಸರಬರಾಜು ಮಾಡುವಷ್ಟು ಕಾಫಿ ಬೆಳೆಯ ಕ್ರಾಂತಿ ಉತ್ತರ ಕನ್ನಡದಲ್ಲಿ ಆಗಿದ್ದು ಇದೇ ಮೊದಲು.

ಹೆಚ್ಚಿನ ಲಾಭ : ವಾರ್ಷಿಕವಾಗಿ 25-50 ಟನ್‌ನಷ್ಟು ಕಾಫಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಮೊದಲು ಇದ್ದ ಮಾವಿಗಿಂತ ಹೆಚ್ಚಿನ ಲಾಭವನ್ನು ಈ ಬೆಳೆ ಕೊಡುತ್ತಿದೆ. ಹಾಗೆಯೇ ಈ ಪ್ಲಾಂಟೇಶನ್ ಆಗಿದ್ದು ಕೇವಲ 5 ವರ್ಷದ ಹಿಂದೆ ಅಂದರೆ 2018ರಲ್ಲಿ. ಅಲ್ಲಿ ತನಕ ಇಲ್ಲಿದೆ ಕಾಫಿ ಘಮಲು ಈಗ ಜೋರಾಗಿದೆ. ಸದ್ಯದರಲ್ಲಿಯೇ ಕಾಫಿ ಉತ್ತರ ಕನ್ನಡದ ಪ್ರಮುಖ ಬೆಳೆ ಆಗಲಿದೆ.

Ramachandra Hegade, who tried coffee as a sub-crop in Malagi village of taluk, 30 kilometers away from Mundagode, is now growing Arabica and Robusta in an area of ​​20 acres. This crop, which is grown in an area called Kedara Thota, has now reached Chikkamagaluru, the coffee hub.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

4 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

10 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

11 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

18 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago