Advertisement
ಪ್ರಮುಖ

ಕಾಫಿನಾಡಿಗೆ ಕಾಫಿ ಸರಬರಾಜು..! | ಶಿರಸಿಯಿಂದ ಚಿಕ್ಕಮಗಳೂರಿಗೆ ಕಾಫಿ ಸರಬರಾಜು ಮಾಡ್ತಿರೋ ಕೃಷಿಕ | ಕಾಫಿಗೆ ಕಾಫಿ ಕುಡಿಸಿದ್ದು ಯಾರು..?

Share

ಸೂರ್ಯನಿಗೆ ಟಾರ್ಚ್‌ ಹಾಕ್ತಿರಾ ಅನ್ನೋ ಮಾತು ನೀವು ಕೇಳಿರಬಹುದು. ಇಲ್ಲಿ ಅದೇ ಕತೆ ಆಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಕಾಫಿ ಸಪ್ಲೈ ಮಾಡ್ತಿದ್ದಾರೆ ಇಲ್ಲೊಬ್ಬ ಕೃಷಿಕ. ಅದು ಕರಾವಳಿಯ ಶಿರಸಿಯಿಂದ. ಹೌದು, ಆಶ್ಚರ್ಯ ಆದ್ರೂ ಇದು ನಿಜ. ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಫಿ ಘಮಲು ಜೋರಾಗಿದೆ. ಕಾಫಿ (Coffee) ಈ ಮಲೆನಾಡಿಗೆ ಹೊಸತಲ್ಲ. ಹಿಂದೊಮ್ಮೆ ಕಾವೇರಿ ಕಾಫಿ ತಳಿ ಇತ್ತು, ನಂತರ ಹೋಯಿತು. ಇದೀಗ ಟನ್‌ಗಟ್ಟಲೆ ಕಾಫಿಯನ್ನು ಬೆಳೆಯುವ ಪ್ರಯತ್ನವನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ಗಡಿ ಕೈ ಮೂಲದ ರಾಮಚಂದ್ರ ಹೆಗಡೆಯವರು ಮಾಡಿದ್ದಾರೆ.

20 ಎಕರೆ ಪ್ರದೇಶದಲ್ಲಿ ಕಾಫಿ ಬೆಳೆ: ಮಲೆನಾಡ ಹೆಬ್ಬಾಗಿಲಾದ ಶಿರಸಿಗೆ ಹೆಜ್ಜೆ ಇಡುವ ಮುನ್ನ ಮಲೆನಾಡಿನ ಸೆರಗಾದ ಮುಂಡಗೋಡನ್ನು ದಾಟಬೇಕು. ಈ ಮುಂಡಗೋಡಿಂದ 30 ಕಿಲೋಮೀಟರ್ ದೂರದ ತಾಲೂಕಿನ ಮಳಗಿ ಗ್ರಾಮದಲ್ಲಿ ಕಾಫಿಯನ್ನು ಉಪಬೆಳೆಯಾಗಿ ಪ್ರಯತ್ನಿಸಿದ ಇವರು, ಈಗ ಅರೇಬಿಕ್ ಹಾಗೂ ರೊಬಸ್ಟಾ ಎರಡು ತಳಿಯನ್ನು 20 ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಕೇದಾರ ತೋಟ ಎಂಬ ಪ್ರದೇಶದಲ್ಲಿ ಬೆಳೆಯಲಾಗುತ್ತಿರುವ ಈ ಬೆಳೆಯು ಈಗ ಕಾಫಿ ಹಬ್ ಆದ ಚಿಕ್ಕಮಗಳೂರನ್ನು ತಲುಪುತಿದೆ.

ಚಿಕ್ಕಮಗಳೂರಿಗೆ ಕಾಫಿ ಸರಬರಾಜು: ಇಲ್ಲಿನ ವಾತಾವರಣಕ್ಕೆ ಕಾಫಿ ಚೆನ್ನಾಗಿ ಒಗ್ಗುತ್ತಿದ್ದು ಅಧಿಕ ಇಳುವರಿಯನ್ನು ನೀಡುತ್ತಿದೆ, ಇನ್ನೊಂದು ವಿಶೇಷವೇನೆಂದರೆ ಇಲ್ಲಿನ ಕಾಫಿಯನ್ನು ಕದಂಬ ಮಾರ್ಕೆಟಿಂಗ್ ಸೊಸೈಟಿ ಮೂಲಕ ಚಿಕ್ಕಮಗಳೂರಿನ ಮೂಲದ ಕಂಪೆನಿಗಳು ಖರೀದಿಸುತ್ತವಂತೆ. ಕಾಫಿನಾಡಿಗೇ ಕಾಫಿ ಸರಬರಾಜು ಮಾಡುವಷ್ಟು ಕಾಫಿ ಬೆಳೆಯ ಕ್ರಾಂತಿ ಉತ್ತರ ಕನ್ನಡದಲ್ಲಿ ಆಗಿದ್ದು ಇದೇ ಮೊದಲು.

ಹೆಚ್ಚಿನ ಲಾಭ : ವಾರ್ಷಿಕವಾಗಿ 25-50 ಟನ್‌ನಷ್ಟು ಕಾಫಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಮೊದಲು ಇದ್ದ ಮಾವಿಗಿಂತ ಹೆಚ್ಚಿನ ಲಾಭವನ್ನು ಈ ಬೆಳೆ ಕೊಡುತ್ತಿದೆ. ಹಾಗೆಯೇ ಈ ಪ್ಲಾಂಟೇಶನ್ ಆಗಿದ್ದು ಕೇವಲ 5 ವರ್ಷದ ಹಿಂದೆ ಅಂದರೆ 2018ರಲ್ಲಿ. ಅಲ್ಲಿ ತನಕ ಇಲ್ಲಿದೆ ಕಾಫಿ ಘಮಲು ಈಗ ಜೋರಾಗಿದೆ. ಸದ್ಯದರಲ್ಲಿಯೇ ಕಾಫಿ ಉತ್ತರ ಕನ್ನಡದ ಪ್ರಮುಖ ಬೆಳೆ ಆಗಲಿದೆ.

Ramachandra Hegade, who tried coffee as a sub-crop in Malagi village of taluk, 30 kilometers away from Mundagode, is now growing Arabica and Robusta in an area of ​​20 acres. This crop, which is grown in an area called Kedara Thota, has now reached Chikkamagaluru, the coffee hub.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

4 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

9 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

18 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago