Advertisement
ಪ್ರಮುಖ

ರಾಜ್ಯದಲ್ಲಿ ಎನ್‌ಇಪಿಗೆ ಕೋಕ್‌ | ಮುಂದಿನ ಶೈಕ್ಷಣಿಕ ವರ್ಷದಿಂದಲೇ ಎಸ್‍ಇಪಿ ಜಾರಿಗೆ ಸರ್ಕಾರದ ಸಿದ್ಧತೆ |

Share

ರಾಷ್ಟ್ರೀಯ ಶಿಕ್ಷಣದ ನೀತಿ National Policy on Education ಎಂಬುದು ಭಾರತದ ಜನರಲ್ಲಿ ಶಿಕ್ಷಣವನ್ನು ಉತ್ತೇಜಿಸಲು ಭಾರತ ಸರ್ಕಾರವು ರೂಪಿಸಿದ ಒಂದು ನೀತಿ. ಈ ನೀತಿಯು ಗ್ರಾಮೀಣ ಮತ್ತು ನಗರ ಭಾರತದ ಕಾಲೇಜು ಮತ್ತು ಪ್ರಾಥಮಿಕ ಶಿಕ್ಷಣವನ್ನು ಒಳಗೊಂಡಿದೆ. 1968 ರಲ್ಲಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರಿಂದ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣದ ನೀತಿ  ಘೋಷಿಸಲ್ಪಟ್ಟಿತು. 1986 ರಲ್ಲಿ ಪ್ರಧಾನಿ ರಾಜೀವ್ ಗಾಂಧಿ ಅವರಿಂದ ಎರಡನೇ ಬಾರಿಗೆ ಘೋಷಿಸಲ್ಪಟ್ಟಿತು. 2017 ರಲ್ಲಿ ಭಾರತ ಸರ್ಕಾರವು ಕಸ್ತೂರಿರಂಗನ್ ಅವರ ನೇತೃತ್ವದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣಕ್ಕಾಗಿ ಕರಡು ಸಿದ್ಧತೆಗಾಗಿ ಹೊಸ ಸಮಿತಿಯನ್ನು ನೇಮಿಸಿದೆ.

ಆದರೆ ಕಾಂಗ್ರೆಸ್‍ನ  ಐದು ಗ್ಯಾರಂಟಿ ಬಳಿಕ ಪ್ರಣಾಳಿಕೆಯಲ್ಲಿರುವ ಮತ್ತೊಂದು ಕಾರ್ಯಕ್ರಮ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ಶುರು ಮಾಡಿದೆ. ಎನ್‍ಇಪಿ ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಲು ಸರ್ಕಾರ ತಯಾರಿ ನಡೆಸಿದೆ. ಎಸ್‍ಇಪಿ ಜಾರಿ ಬಗ್ಗೆ ಈಗಾಗಲೇ ಹಲವು ಹಂತದ ಸಭೆಗಳನ್ನು ಉನ್ನತ ಶಿಕ್ಷಣ ಸಚಿವರೊಂದಿಗೆ ನಡೆಸಲಾಗಿದೆ. ಅದಕ್ಕಾಗಿ ಹಂತ ಹಂತವಾಗಿ ಎನ್‍ಇಪಿ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ವರ್ಷದಿಂದಲೇ ಎನ್‍ಇಪಿ ರದ್ದು ಮಾಡಿ ಎಸ್‍ಇಪಿ ಜಾರಿಗೆ ಸರ್ಕಾರದ ಚಿಂತನೆ ನಡೆಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‍ಇಪಿ ಅಡಿ ವಿದ್ಯಾರ್ಥಿಗಳನ್ನ ದಾಖಲಾತಿ ಮಾಡಿಕೊಳ್ಳುವುದನ್ನು ಕೈಬಿಡಲಾಗುತ್ತದೆ. ಈಗಾಗಲೇ ಅದರ ಅಡಿ ದಾಖಲಾದ ವಿದ್ಯಾರ್ಥಿಗಳ ಕೋರ್ಸ್ ಮುಕ್ತಾಯಕ್ಕೆ ಕ್ರಮವಹಿಸಲಾಗುತ್ತದೆ. ಎಸ್‍ಇಪಿ ಜಾರಿಗೆ ನೀತಿ ನಿಯಮಗಳು, ಪಠ್ಯಕ್ರಮ ಸೇರಿದಂತೆ ಶಿಕ್ಷಣ ನೀತಿ ರಚನೆಗೆ ತಜ್ಞರ ಸಮಿತಿ ರಚನೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಶೀಘ್ರವೇ ತಜ್ಞರ ರಚನೆ ಮಾಡಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ. ಬಹುತೇಕ ರಾಜ್ಯ ಸರ್ಕಾರದ ಅಧೀನದ ವಿವಿಗಳ ಅಭಿಪ್ರಾಯ ಪಡೆದಿರುವ ಸರ್ಕಾರ, ತಜ್ಞರ ಸಮಿತಿಯ ವರದಿ ಪಡೆದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಕ್ರಮಕ್ಕೆ ಮಂದಾಗಲಿದೆ. ಎನ್‍ಇಪಿಯ ಕೆಲವು ಅಂಶಗಳೊಂದಿಗೆ ತಜ್ಞರ ಸಮಿತಿಯಿಂದ ಸರ್ಕಾರವೇ ವಿಶೇಷ ಶಿಕ್ಷಣ ನೀತಿ ರೂಪಿಸಲಿದೆ. ಈ ಯೋಜನೆ ಫಲಿಸಿದರೆ 2024-25ನೇ ಸಾಲಿನಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿಯಾಗುವ ಸಾಧ್ಯತೆ ಇದೆ.

Source : Digital Media

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

9 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

9 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

10 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

10 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

23 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago