Advertisement
ಹವಾಮಾನ

11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ತಾಪಮಾನ ಕುಸಿತದ ಹಿನ್ನಲೆಯಲ್ಲಿ ತೀವ್ರ ಮಂಜು ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಿನ ಸಮಯದಲ್ಲಿ ಮಂಜಿನ ಪ್ರಭಾವ ಹೆಚ್ಚಾಗಿದ್ದು, ಇದು ಗೋಚರತೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಯಾಣಿಕರು ನಿಧಾನವಾಗಿ ವಾಹನ ಚಲಾಯಿಸಲು ಮತ್ತು ಫಾಗ್‌ ಲೈಟ್ ಬಳಸಲು ಸೂಚಿಸಲಾಗಿದೆ.‌

ಈಶಾನ್ಯ ಉತ್ತರ ಪ್ರದೇಶದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ನೀರೀಕ್ಷೆಯಿದೆ ಮತ್ತು ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣೀಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮಂಜಿನ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಬೇಕು ಮತ್ತು ವಾಹನ ಚಲಾಯಿಸುವಾಗ ಫಾಗ್ ಲೈಟ್‌  ಬಳಸಬೇಕು ಎಂದು ಐಎಮ್ ಡಿ ಸಲಹೆ ನೀಡಿದೆ.

ಮಧ್ಯಪ್ರದೇಶ-ಮಹಾರಾಷ್ಟ್ರದಲ್ಲಿ ಶೀತಗಾಳಿ ಎಚ್ಚರಿಕೆ:  ಕಳೆದ ಐದು ದಿನಗಳಿಂದ ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ತೆಲಂಗಾಣ ಮತ್ತು ಉತ್ತರ ಒಡಿಶಾದಲ್ಲಿ ಶೀತಗಾಳಿಯ ಪರಿಣಾಮ ಬೀರುತ್ತಿದೆ ಮತ್ತು ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪ್ರದೇಶಗಳು ಮುಂದಿನ ಎರಡು ಮೂರು ದಿನಗಳಲ್ಲಿ ಚಳಿಯಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉತ್ತರ ಭಾರತದಲ್ಲಿ ತಾಪಮಾನವು ಸಾಮಾನ್ಯವಾಗಿರುವು ಸಾಧ್ಯತೆಯಿದೆ.  ಪಂಜಾಬ್ ಹರಿಯಾಣ ಚಂಡೀಗಢ, ಹಿಮಾಚಲ ಪ್ರದೇಶ ಪೂರ್ವ ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಕಂಡುಬರಬಹುದು.

ಪಂಜಾಬ್ ಹರಿಯಾಣದಲ್ಲಿ ತೀವ್ರ ಚಳಿ: ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಚಳಿ ಇದೆ. ಮಂಗಳವಾರ ಎರಡೂ ನೆರೆಯ ರಾಜ್ಯಗಳಲ್ಲಿ ಅತ್ಯಂತ ಶೀತ ಸ್ಥಳವಾಗಿದ್ದು, ಕನಿಷ್ಠ ತಾಪಮಾನ 3.6 ಡಿಗ್ರಿ ಆಗಿತ್ತು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಮೃತಸರದಲ್ಲಿ ಕನಿಷ್ಠ ತಾಪಾಮನಾ 6.1 ಡಿಗ್ರಿ ಲುಧಿಯಾದಲ್ಲಿ 9.2 ಡಿಗ್ರಿ ಮತ್ತು  ಪಟಿಯಾಲದಲ್ಲಿ 10.1 ಡಿಗ್ರಿ ದಾಖಲಾಗಿದೆ. ಚಂಡೀಗಢದಲ್ಲಿಯೂ ಸಹ ಶೀತ ಅಲೆಯ ಪರಿಣಾಮ ಕಂಡುಬಂದಿದ್ದು, ತಾಪಾಮನಾ 8.6 ಡಿಗ್ರಿ ದಾಖಲಾಗಿದೆ. ಹರಿಯಾಣದಲ್ಲಿ ಅಂಬಾಲಾದಲ್ಲಿ ಕನಿಷ್ಠ ತಾಪಮಾನ 10.9 ಡಿಗ್ರಿ ಮತ್ತು ಹಿಸಾರ್ ನಲ್ಲಿ 6.7́ಡಿಗ್ರಿ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

48 minutes ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

5 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago