Advertisement
ಹವಾಮಾನ

11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ತಾಪಮಾನ ಕುಸಿತದ ಹಿನ್ನಲೆಯಲ್ಲಿ ತೀವ್ರ ಮಂಜು ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಿನ ಸಮಯದಲ್ಲಿ ಮಂಜಿನ ಪ್ರಭಾವ ಹೆಚ್ಚಾಗಿದ್ದು, ಇದು ಗೋಚರತೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಯಾಣಿಕರು ನಿಧಾನವಾಗಿ ವಾಹನ ಚಲಾಯಿಸಲು ಮತ್ತು ಫಾಗ್‌ ಲೈಟ್ ಬಳಸಲು ಸೂಚಿಸಲಾಗಿದೆ.‌

ಈಶಾನ್ಯ ಉತ್ತರ ಪ್ರದೇಶದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ನೀರೀಕ್ಷೆಯಿದೆ ಮತ್ತು ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣೀಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮಂಜಿನ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಬೇಕು ಮತ್ತು ವಾಹನ ಚಲಾಯಿಸುವಾಗ ಫಾಗ್ ಲೈಟ್‌  ಬಳಸಬೇಕು ಎಂದು ಐಎಮ್ ಡಿ ಸಲಹೆ ನೀಡಿದೆ.

ಮಧ್ಯಪ್ರದೇಶ-ಮಹಾರಾಷ್ಟ್ರದಲ್ಲಿ ಶೀತಗಾಳಿ ಎಚ್ಚರಿಕೆ:  ಕಳೆದ ಐದು ದಿನಗಳಿಂದ ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ತೆಲಂಗಾಣ ಮತ್ತು ಉತ್ತರ ಒಡಿಶಾದಲ್ಲಿ ಶೀತಗಾಳಿಯ ಪರಿಣಾಮ ಬೀರುತ್ತಿದೆ ಮತ್ತು ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪ್ರದೇಶಗಳು ಮುಂದಿನ ಎರಡು ಮೂರು ದಿನಗಳಲ್ಲಿ ಚಳಿಯಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉತ್ತರ ಭಾರತದಲ್ಲಿ ತಾಪಮಾನವು ಸಾಮಾನ್ಯವಾಗಿರುವು ಸಾಧ್ಯತೆಯಿದೆ.  ಪಂಜಾಬ್ ಹರಿಯಾಣ ಚಂಡೀಗಢ, ಹಿಮಾಚಲ ಪ್ರದೇಶ ಪೂರ್ವ ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಕಂಡುಬರಬಹುದು.

ಪಂಜಾಬ್ ಹರಿಯಾಣದಲ್ಲಿ ತೀವ್ರ ಚಳಿ: ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಚಳಿ ಇದೆ. ಮಂಗಳವಾರ ಎರಡೂ ನೆರೆಯ ರಾಜ್ಯಗಳಲ್ಲಿ ಅತ್ಯಂತ ಶೀತ ಸ್ಥಳವಾಗಿದ್ದು, ಕನಿಷ್ಠ ತಾಪಮಾನ 3.6 ಡಿಗ್ರಿ ಆಗಿತ್ತು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಮೃತಸರದಲ್ಲಿ ಕನಿಷ್ಠ ತಾಪಾಮನಾ 6.1 ಡಿಗ್ರಿ ಲುಧಿಯಾದಲ್ಲಿ 9.2 ಡಿಗ್ರಿ ಮತ್ತು  ಪಟಿಯಾಲದಲ್ಲಿ 10.1 ಡಿಗ್ರಿ ದಾಖಲಾಗಿದೆ. ಚಂಡೀಗಢದಲ್ಲಿಯೂ ಸಹ ಶೀತ ಅಲೆಯ ಪರಿಣಾಮ ಕಂಡುಬಂದಿದ್ದು, ತಾಪಾಮನಾ 8.6 ಡಿಗ್ರಿ ದಾಖಲಾಗಿದೆ. ಹರಿಯಾಣದಲ್ಲಿ ಅಂಬಾಲಾದಲ್ಲಿ ಕನಿಷ್ಠ ತಾಪಮಾನ 10.9 ಡಿಗ್ರಿ ಮತ್ತು ಹಿಸಾರ್ ನಲ್ಲಿ 6.7́ಡಿಗ್ರಿ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

22 minutes ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago