Advertisement
ಹವಾಮಾನ

11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ತಾಪಮಾನ ಕುಸಿತದ ಹಿನ್ನಲೆಯಲ್ಲಿ ತೀವ್ರ ಮಂಜು ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಿನ ಸಮಯದಲ್ಲಿ ಮಂಜಿನ ಪ್ರಭಾವ ಹೆಚ್ಚಾಗಿದ್ದು, ಇದು ಗೋಚರತೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಯಾಣಿಕರು ನಿಧಾನವಾಗಿ ವಾಹನ ಚಲಾಯಿಸಲು ಮತ್ತು ಫಾಗ್‌ ಲೈಟ್ ಬಳಸಲು ಸೂಚಿಸಲಾಗಿದೆ.‌

ಈಶಾನ್ಯ ಉತ್ತರ ಪ್ರದೇಶದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ನೀರೀಕ್ಷೆಯಿದೆ ಮತ್ತು ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣೀಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮಂಜಿನ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಬೇಕು ಮತ್ತು ವಾಹನ ಚಲಾಯಿಸುವಾಗ ಫಾಗ್ ಲೈಟ್‌  ಬಳಸಬೇಕು ಎಂದು ಐಎಮ್ ಡಿ ಸಲಹೆ ನೀಡಿದೆ.

ಮಧ್ಯಪ್ರದೇಶ-ಮಹಾರಾಷ್ಟ್ರದಲ್ಲಿ ಶೀತಗಾಳಿ ಎಚ್ಚರಿಕೆ:  ಕಳೆದ ಐದು ದಿನಗಳಿಂದ ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ತೆಲಂಗಾಣ ಮತ್ತು ಉತ್ತರ ಒಡಿಶಾದಲ್ಲಿ ಶೀತಗಾಳಿಯ ಪರಿಣಾಮ ಬೀರುತ್ತಿದೆ ಮತ್ತು ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪ್ರದೇಶಗಳು ಮುಂದಿನ ಎರಡು ಮೂರು ದಿನಗಳಲ್ಲಿ ಚಳಿಯಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉತ್ತರ ಭಾರತದಲ್ಲಿ ತಾಪಮಾನವು ಸಾಮಾನ್ಯವಾಗಿರುವು ಸಾಧ್ಯತೆಯಿದೆ.  ಪಂಜಾಬ್ ಹರಿಯಾಣ ಚಂಡೀಗಢ, ಹಿಮಾಚಲ ಪ್ರದೇಶ ಪೂರ್ವ ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಕಂಡುಬರಬಹುದು.

ಪಂಜಾಬ್ ಹರಿಯಾಣದಲ್ಲಿ ತೀವ್ರ ಚಳಿ: ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಚಳಿ ಇದೆ. ಮಂಗಳವಾರ ಎರಡೂ ನೆರೆಯ ರಾಜ್ಯಗಳಲ್ಲಿ ಅತ್ಯಂತ ಶೀತ ಸ್ಥಳವಾಗಿದ್ದು, ಕನಿಷ್ಠ ತಾಪಮಾನ 3.6 ಡಿಗ್ರಿ ಆಗಿತ್ತು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಮೃತಸರದಲ್ಲಿ ಕನಿಷ್ಠ ತಾಪಾಮನಾ 6.1 ಡಿಗ್ರಿ ಲುಧಿಯಾದಲ್ಲಿ 9.2 ಡಿಗ್ರಿ ಮತ್ತು  ಪಟಿಯಾಲದಲ್ಲಿ 10.1 ಡಿಗ್ರಿ ದಾಖಲಾಗಿದೆ. ಚಂಡೀಗಢದಲ್ಲಿಯೂ ಸಹ ಶೀತ ಅಲೆಯ ಪರಿಣಾಮ ಕಂಡುಬಂದಿದ್ದು, ತಾಪಾಮನಾ 8.6 ಡಿಗ್ರಿ ದಾಖಲಾಗಿದೆ. ಹರಿಯಾಣದಲ್ಲಿ ಅಂಬಾಲಾದಲ್ಲಿ ಕನಿಷ್ಠ ತಾಪಮಾನ 10.9 ಡಿಗ್ರಿ ಮತ್ತು ಹಿಸಾರ್ ನಲ್ಲಿ 6.7́ಡಿಗ್ರಿ ದಾಖಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

10 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

10 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 days ago