Advertisement
ಹವಾಮಾನ

11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ತಾಪಮಾನ ಕುಸಿತದ ಹಿನ್ನಲೆಯಲ್ಲಿ ತೀವ್ರ ಮಂಜು ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಿನ ಸಮಯದಲ್ಲಿ ಮಂಜಿನ ಪ್ರಭಾವ ಹೆಚ್ಚಾಗಿದ್ದು, ಇದು ಗೋಚರತೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಯಾಣಿಕರು ನಿಧಾನವಾಗಿ ವಾಹನ ಚಲಾಯಿಸಲು ಮತ್ತು ಫಾಗ್‌ ಲೈಟ್ ಬಳಸಲು ಸೂಚಿಸಲಾಗಿದೆ.‌

Advertisement

ಈಶಾನ್ಯ ಉತ್ತರ ಪ್ರದೇಶದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ನೀರೀಕ್ಷೆಯಿದೆ ಮತ್ತು ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣೀಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮಂಜಿನ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಬೇಕು ಮತ್ತು ವಾಹನ ಚಲಾಯಿಸುವಾಗ ಫಾಗ್ ಲೈಟ್‌  ಬಳಸಬೇಕು ಎಂದು ಐಎಮ್ ಡಿ ಸಲಹೆ ನೀಡಿದೆ.

ಮಧ್ಯಪ್ರದೇಶ-ಮಹಾರಾಷ್ಟ್ರದಲ್ಲಿ ಶೀತಗಾಳಿ ಎಚ್ಚರಿಕೆ:  ಕಳೆದ ಐದು ದಿನಗಳಿಂದ ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ತೆಲಂಗಾಣ ಮತ್ತು ಉತ್ತರ ಒಡಿಶಾದಲ್ಲಿ ಶೀತಗಾಳಿಯ ಪರಿಣಾಮ ಬೀರುತ್ತಿದೆ ಮತ್ತು ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪ್ರದೇಶಗಳು ಮುಂದಿನ ಎರಡು ಮೂರು ದಿನಗಳಲ್ಲಿ ಚಳಿಯಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉತ್ತರ ಭಾರತದಲ್ಲಿ ತಾಪಮಾನವು ಸಾಮಾನ್ಯವಾಗಿರುವು ಸಾಧ್ಯತೆಯಿದೆ.  ಪಂಜಾಬ್ ಹರಿಯಾಣ ಚಂಡೀಗಢ, ಹಿಮಾಚಲ ಪ್ರದೇಶ ಪೂರ್ವ ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಕಂಡುಬರಬಹುದು.

Advertisement

ಪಂಜಾಬ್ ಹರಿಯಾಣದಲ್ಲಿ ತೀವ್ರ ಚಳಿ: ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಚಳಿ ಇದೆ. ಮಂಗಳವಾರ ಎರಡೂ ನೆರೆಯ ರಾಜ್ಯಗಳಲ್ಲಿ ಅತ್ಯಂತ ಶೀತ ಸ್ಥಳವಾಗಿದ್ದು, ಕನಿಷ್ಠ ತಾಪಮಾನ 3.6 ಡಿಗ್ರಿ ಆಗಿತ್ತು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಮೃತಸರದಲ್ಲಿ ಕನಿಷ್ಠ ತಾಪಾಮನಾ 6.1 ಡಿಗ್ರಿ ಲುಧಿಯಾದಲ್ಲಿ 9.2 ಡಿಗ್ರಿ ಮತ್ತು  ಪಟಿಯಾಲದಲ್ಲಿ 10.1 ಡಿಗ್ರಿ ದಾಖಲಾಗಿದೆ. ಚಂಡೀಗಢದಲ್ಲಿಯೂ ಸಹ ಶೀತ ಅಲೆಯ ಪರಿಣಾಮ ಕಂಡುಬಂದಿದ್ದು, ತಾಪಾಮನಾ 8.6 ಡಿಗ್ರಿ ದಾಖಲಾಗಿದೆ. ಹರಿಯಾಣದಲ್ಲಿ ಅಂಬಾಲಾದಲ್ಲಿ ಕನಿಷ್ಠ ತಾಪಮಾನ 10.9 ಡಿಗ್ರಿ ಮತ್ತು ಹಿಸಾರ್ ನಲ್ಲಿ 6.7́ಡಿಗ್ರಿ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

20 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

20 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago