ಬಕುಂಗ್‌ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮತ್ತೆ ಚಳಿ ಆರಂಭ

December 18, 2025
7:52 AM

ದಿತ್ವಾ ಚಂಡಮಾರುತವು  ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು.  ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ.  ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.

ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್‌ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ.  ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ.  ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror