ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.
ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ. ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ. ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…