ದಿತ್ವಾ ಚಂಡಮಾರುತವು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.
ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ. ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ. ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…