ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ಚಳಿ ಹೆಚ್ಚಾಗಿದೆ. ಇದೀಗ ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್ಗೆ ಇಳಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎಂಬ ನಿರೀಕ್ಷೆ ಇದೆ.
ಈ ತಿಂಗಳ ಕೊನೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಹಿಮಾಪಾತವಾಗಬಹುದು .ಇಂದಿನಿಂದ 2 ದಿನಗಳವರೆಗೆ ಅರುಣಾಚಾಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ. ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್ನ ಉತ್ತರ ಭಾಗಗಳು ಮತ್ತು ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು 27 ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490