ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ಚಳಿ ಹೆಚ್ಚಾಗಿದೆ. ಇದೀಗ ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್ಗೆ ಇಳಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎಂಬ ನಿರೀಕ್ಷೆ ಇದೆ.
ಈ ತಿಂಗಳ ಕೊನೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಹಿಮಾಪಾತವಾಗಬಹುದು .ಇಂದಿನಿಂದ 2 ದಿನಗಳವರೆಗೆ ಅರುಣಾಚಾಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ. ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್ನ ಉತ್ತರ ಭಾಗಗಳು ಮತ್ತು ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು 27 ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…