Advertisement
MIRROR FOCUS

ಕುಸಿದ ಅಡಿಕೆ ಮಾರುಕಟ್ಟೆ | ರಾಜ್ಯದಲ್ಲಿ ಅಡಿಕೆಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯ | ಮೇಘಾಲಯದಲ್ಲೂ ಬೆಂಬಲ ಬೆಲೆ ಚರ್ಚೆ |

Share

ಅಡಿಕೆ ಮಾರುಕಟ್ಟೆ ಕುಸಿತವಾಗಿದ್ದು ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ  ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಾಜಿ ಶಾಸಕ , ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ ಸಂಜೀವ ಮಠಂದೂರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರಾವಳಿ ಜಿಲ್ಲೆಯ ಆರ್ಥಿಕ ಜೀವನಾಡಿಯಾದ ಅಡಿಕೆ ಬೆಳೆಯ ಧಾರಣೆ ಇದೀಗ ಕುಸಿತವಾಗಿದೆ. 500 ಗಡಿ ದಾಟಿದ್ದ ಅಡಿಕೆ ಬೆಲೆ ಇದೀಗ 340 ಕ್ಕೆ ಕುಸಿದಿದೆ,ಅಡಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡ ಕೃಷಿಕನ ಮೇಲೆ ಇದು ದೊಡ್ಡ ಪರಿಣಾಮವನ್ನೇ ಬೀರಿದೆ ಎಂದರು. ಅಡಿಕೆ ಧಾರಣೆಯ ವ್ಯತ್ಯಾಸವು ಜಿಲ್ಲೆಯ ಆರ್ಥಿಕ ವಹಿವಾಟಿನ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಶಿರಸಿಯ ಟಿಎಸ್‌ಎಸ್‌ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅವರು ಅಡಿಕೆ ದರ ಕುಸಿತಕ್ಕೆ ವಿದೇಶಿ ಅಡಿಕೆ ಆಮದು ಕಾರಣವಾಗಿದ್ದು, ಧಾರಣೆ ಕುಸಿತದ ಆತಂಕ ಬೇಡ ಎಂದು ಹೇಳಿದ್ದಾರೆ. ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿ ಮಾಡಲಾಗುವುದು. ಈ ಸ್ಥಿತಿಯಲ್ಲಿ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಈಗ ಸಂಕಷ್ಟ ಪಡುವ ಸಮಯವಾಗುತ್ತಿದೆ ಕಳೆದ 15-20 ದಿನದಲ್ಲಿ ಅಡಿಕೆ ಧಾರಣೆ ಬರೋಬ್ಬರಿ 25-35 ರೂಪಾಯಿ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 80 – 90 ರೂಪಾಯಿಯಷ್ಟು ಕುಸಿತವಾಗಿದೆ. ಅಡಿಕೆ ಫಸಲೂ ಕಡಿಮೆಯಾಗುತ್ತಿದೆ, ಧಾರಣೆಯೂ ಇಳಿಕೆಯಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ಬರಗಾಲದ ಹೊಡೆತ  ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅಡಿಕೆ ವಿಸ್ತರಣೆಯ ಪ್ರದೇಶದಲ್ಲಿ ಕಂಡುಬಂದಿದೆ. ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ.ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಕರಾವಳಿ ಜಿಲ್ಲೆಯಲ್ಲಿ ಅಡಿಕೆ ಧಾರಣೆಗೆ ಹೊಡೆತ ಬಿದ್ದರೆ ಆರ್ಥಿಕವಾಗಿಯೂ ಜಿಲ್ಲೆಗೆ ಹೊಡೆತ ಬೀಳುತ್ತದೆ.

ಮೇಘಾಲಯದ ವಿಧಾನಸಭೆಯಲ್ಲೂ ಅಡಿಕೆ ಬೆಳೆಯ ಬಗ್ಗೆ ಚರ್ಚೆಯಾಗಿದೆ. ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ತರಬಹುದೇ ಎಂಬ ಚರ್ಚೆಯಾಗಿದೆ.ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ರಿಂಬುಯಿ ಅವರು ಈ ಪ್ರಶ್ನೆ ಎತ್ತಿದ್ದಾರೆ. ಅಡಿಕೆ ಬೆಲೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಇಳಿಕೆಯಾಗಿರುವುದರಿಂದ ಮೇಘಾಲಯದ ರಾಜ್ಯದಾದ್ಯಂತ ಅಡಿಕೆ ರೈತರು ಕಂಗಾಲಾಗಿದ್ದಾರೆ ಎಂದು ರಿಂಬುಯಿ  ಹೇಳಿದರು.ಇದರಿಂದ ರೈತರ ಆದಾಯಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿಸಿದರು.2019-20 ನೇ ಸಾಲಿನಲ್ಲಿ ಅಡಿಕೆ ಬೆಳೆಯುವ ಪ್ರದೇಶವು 18,231 ಹೆಕ್ಟೇರ್‌ನಿಂದ ಇತ್ತು, ಈಗ ಅದು 34,410 ಹೆಕ್ಟೇರ್‌ಗೆ ಏರಿಕೆಯಾಗಿದೆ  ಎಂದು  ಉಲ್ಲೇಖಿಸಿದ್ದಾರೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವ, ಡಾ ಮಜೆಲ್ ಅಂಪಾರೀನ್ ಲಿಂಗ್ಡೋಹ್ ಮಾತನಾಡಿ  ರಾಜ್ಯದಲ್ಲಿ ಅಡಿಕೆ ಉತ್ಪಾದನೆಯೆ ಹೆಚ್ಚಾಗಿರುವುದು ನಿಜ,  ಕೃಷಿಕರಿಗೆ ಅಗತ್ಯವಾದ ಎಲ್ಲಾ ನೆರವು ನೀಡಲಾಗುತ್ತಿದೆ. ಎಂಎಸ್‌ಪಿಗೆ ಸಂಬಂಧಿಸಿದಂತೆ ಸರ್ಕಾರವು  ಪರಿಶೀಲಿಸುತ್ತದೆ ಎಂದು  ಭರವಸೆ ನೀಡಿದರು.

ಚರ್ಚೆಯ ಬಳಿಕ ಮಾತನಾಡಿದ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಅಡಿಕೆಯನ್ನು ಸಂಸ್ಕರಿಸಿ ಮಾರಾಟ ಮಾಡಿದರೆ ಹೆಚ್ಚು ದರ ಸಿಗುತ್ತದೆ. ಸಂಸ್ಕರಿಸಿದ ಅಡಿಕೆಯ ಮೌಲ್ಯವು ಹತ್ತು ಪಟ್ಟು ಬೆಲೆಗೆ ಮಾರಾಟವಾಗುತ್ತದೆ .ಇಂದು ಸಂಸ್ಕರಿಸಿದ ಅಡಿಕೆ ಪ್ರತಿ ಕೆಜಿಗೆ 400-500 ರೂ.ಗಳಿಗೆ ಮಾರಾಟವಾಗುತ್ತಿದೆ, ಆದ್ದರಿಂದ ನಾವು ಅಡಿಕೆಯನ್ನು ಸಂಸ್ಕರಿಸುವ ಮುಂದಿನ ಮಾರ್ಗವನ್ನು ತಿಳಿದುಕೊಂಡು  ಮೌಲ್ಯವರ್ಧನೆ ಕಡೆಗೂ ಗಮನಹರಿಸಬೇಕು ಎಂದು ಸಂಗ್ಮಾ ಹೇಳಿದರು.

collapsed Arecanut market. There is  demand for announcement of Minimum support price.Arecanut market is also an important crop of economic transactions in the coastal district. Therefore, former MLA Sanjeeva Matandoor has urged the Karnataka government to immediately focus on Arecanut market support price.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

12 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

13 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago