Advertisement
MIRROR FOCUS

ಕುಸಿದ ಅಡಿಕೆ ಮಾರುಕಟ್ಟೆ | ರಾಜ್ಯದಲ್ಲಿ ಅಡಿಕೆಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯ | ಮೇಘಾಲಯದಲ್ಲೂ ಬೆಂಬಲ ಬೆಲೆ ಚರ್ಚೆ |

Share

ಅಡಿಕೆ ಮಾರುಕಟ್ಟೆ ಕುಸಿತವಾಗಿದ್ದು ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ  ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಾಜಿ ಶಾಸಕ , ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ ಸಂಜೀವ ಮಠಂದೂರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರಾವಳಿ ಜಿಲ್ಲೆಯ ಆರ್ಥಿಕ ಜೀವನಾಡಿಯಾದ ಅಡಿಕೆ ಬೆಳೆಯ ಧಾರಣೆ ಇದೀಗ ಕುಸಿತವಾಗಿದೆ. 500 ಗಡಿ ದಾಟಿದ್ದ ಅಡಿಕೆ ಬೆಲೆ ಇದೀಗ 340 ಕ್ಕೆ ಕುಸಿದಿದೆ,ಅಡಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡ ಕೃಷಿಕನ ಮೇಲೆ ಇದು ದೊಡ್ಡ ಪರಿಣಾಮವನ್ನೇ ಬೀರಿದೆ ಎಂದರು. ಅಡಿಕೆ ಧಾರಣೆಯ ವ್ಯತ್ಯಾಸವು ಜಿಲ್ಲೆಯ ಆರ್ಥಿಕ ವಹಿವಾಟಿನ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಶಿರಸಿಯ ಟಿಎಸ್‌ಎಸ್‌ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅವರು ಅಡಿಕೆ ದರ ಕುಸಿತಕ್ಕೆ ವಿದೇಶಿ ಅಡಿಕೆ ಆಮದು ಕಾರಣವಾಗಿದ್ದು, ಧಾರಣೆ ಕುಸಿತದ ಆತಂಕ ಬೇಡ ಎಂದು ಹೇಳಿದ್ದಾರೆ. ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿ ಮಾಡಲಾಗುವುದು. ಈ ಸ್ಥಿತಿಯಲ್ಲಿ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಈಗ ಸಂಕಷ್ಟ ಪಡುವ ಸಮಯವಾಗುತ್ತಿದೆ ಕಳೆದ 15-20 ದಿನದಲ್ಲಿ ಅಡಿಕೆ ಧಾರಣೆ ಬರೋಬ್ಬರಿ 25-35 ರೂಪಾಯಿ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 80 – 90 ರೂಪಾಯಿಯಷ್ಟು ಕುಸಿತವಾಗಿದೆ. ಅಡಿಕೆ ಫಸಲೂ ಕಡಿಮೆಯಾಗುತ್ತಿದೆ, ಧಾರಣೆಯೂ ಇಳಿಕೆಯಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ಬರಗಾಲದ ಹೊಡೆತ  ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅಡಿಕೆ ವಿಸ್ತರಣೆಯ ಪ್ರದೇಶದಲ್ಲಿ ಕಂಡುಬಂದಿದೆ. ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ.ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಕರಾವಳಿ ಜಿಲ್ಲೆಯಲ್ಲಿ ಅಡಿಕೆ ಧಾರಣೆಗೆ ಹೊಡೆತ ಬಿದ್ದರೆ ಆರ್ಥಿಕವಾಗಿಯೂ ಜಿಲ್ಲೆಗೆ ಹೊಡೆತ ಬೀಳುತ್ತದೆ.

ಮೇಘಾಲಯದ ವಿಧಾನಸಭೆಯಲ್ಲೂ ಅಡಿಕೆ ಬೆಳೆಯ ಬಗ್ಗೆ ಚರ್ಚೆಯಾಗಿದೆ. ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ತರಬಹುದೇ ಎಂಬ ಚರ್ಚೆಯಾಗಿದೆ.ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ರಿಂಬುಯಿ ಅವರು ಈ ಪ್ರಶ್ನೆ ಎತ್ತಿದ್ದಾರೆ. ಅಡಿಕೆ ಬೆಲೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಇಳಿಕೆಯಾಗಿರುವುದರಿಂದ ಮೇಘಾಲಯದ ರಾಜ್ಯದಾದ್ಯಂತ ಅಡಿಕೆ ರೈತರು ಕಂಗಾಲಾಗಿದ್ದಾರೆ ಎಂದು ರಿಂಬುಯಿ  ಹೇಳಿದರು.ಇದರಿಂದ ರೈತರ ಆದಾಯಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿಸಿದರು.2019-20 ನೇ ಸಾಲಿನಲ್ಲಿ ಅಡಿಕೆ ಬೆಳೆಯುವ ಪ್ರದೇಶವು 18,231 ಹೆಕ್ಟೇರ್‌ನಿಂದ ಇತ್ತು, ಈಗ ಅದು 34,410 ಹೆಕ್ಟೇರ್‌ಗೆ ಏರಿಕೆಯಾಗಿದೆ  ಎಂದು  ಉಲ್ಲೇಖಿಸಿದ್ದಾರೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವ, ಡಾ ಮಜೆಲ್ ಅಂಪಾರೀನ್ ಲಿಂಗ್ಡೋಹ್ ಮಾತನಾಡಿ  ರಾಜ್ಯದಲ್ಲಿ ಅಡಿಕೆ ಉತ್ಪಾದನೆಯೆ ಹೆಚ್ಚಾಗಿರುವುದು ನಿಜ,  ಕೃಷಿಕರಿಗೆ ಅಗತ್ಯವಾದ ಎಲ್ಲಾ ನೆರವು ನೀಡಲಾಗುತ್ತಿದೆ. ಎಂಎಸ್‌ಪಿಗೆ ಸಂಬಂಧಿಸಿದಂತೆ ಸರ್ಕಾರವು  ಪರಿಶೀಲಿಸುತ್ತದೆ ಎಂದು  ಭರವಸೆ ನೀಡಿದರು.

ಚರ್ಚೆಯ ಬಳಿಕ ಮಾತನಾಡಿದ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಅಡಿಕೆಯನ್ನು ಸಂಸ್ಕರಿಸಿ ಮಾರಾಟ ಮಾಡಿದರೆ ಹೆಚ್ಚು ದರ ಸಿಗುತ್ತದೆ. ಸಂಸ್ಕರಿಸಿದ ಅಡಿಕೆಯ ಮೌಲ್ಯವು ಹತ್ತು ಪಟ್ಟು ಬೆಲೆಗೆ ಮಾರಾಟವಾಗುತ್ತದೆ .ಇಂದು ಸಂಸ್ಕರಿಸಿದ ಅಡಿಕೆ ಪ್ರತಿ ಕೆಜಿಗೆ 400-500 ರೂ.ಗಳಿಗೆ ಮಾರಾಟವಾಗುತ್ತಿದೆ, ಆದ್ದರಿಂದ ನಾವು ಅಡಿಕೆಯನ್ನು ಸಂಸ್ಕರಿಸುವ ಮುಂದಿನ ಮಾರ್ಗವನ್ನು ತಿಳಿದುಕೊಂಡು  ಮೌಲ್ಯವರ್ಧನೆ ಕಡೆಗೂ ಗಮನಹರಿಸಬೇಕು ಎಂದು ಸಂಗ್ಮಾ ಹೇಳಿದರು.

collapsed Arecanut market. There is  demand for announcement of Minimum support price.Arecanut market is also an important crop of economic transactions in the coastal district. Therefore, former MLA Sanjeeva Matandoor has urged the Karnataka government to immediately focus on Arecanut market support price.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 hour ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

2 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

19 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago