ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಈಚೆಗೆ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ವಹಿಸಿ, ಶಿಕ್ಷಕ ರಕ್ಷಕ ಸಂಘದ ಪಾತ್ರದ ಮಹತ್ವವನ್ನು ಉಲ್ಲೇಖಿಸುವುದರೊಂದಿಗೆ ಕಾಲೇಜಿನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.ಶೈಕ್ಷಣಿಕ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ನೂತನ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದಯ ಅವರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಪ್ರೇಮ, ಸಹ ಕಾರ್ಯದರ್ಶಿಯಾಗಿ ಸೇಸಮ್ಮ ಇವರು ಆಯ್ಕೆಗೊಂಡರು. ಸದಸ್ಯರುಗಳಾದ ಶಿವಣ್ಣ, ಪಾರ್ವತಿ ಹಾಗೂ ನಾಗೇಶ ಇವರುಗಳು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೂ ಮುಂದುವರಿದರು. ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಡಾ. ನೂರಂದಪ್ಪ ನಡೆಸಿಕೊಟ್ಟರು.
ಕಾರ್ಯಕ್ರಮವು ದಿವ್ಯಶ್ರೀ ಜಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಿಕ್ಷಕರ ಕಾರ್ಯಕಾರಿ ಸಮಿತಿ, ಉಪಾಧ್ಯಕ್ಷ ಡಾ. ಸೀತಾರಾಮ ಪಿ. ಸ್ವಾಗತಿಸಿದರು. ಶಿಕ್ಷಕ- ರಕ್ಷಕ ಸಂಘದ ಖಜಾಂಜಿ ವೆರೋನಿಕಾ ಪ್ರಭಾ ವಿ. ಪಿ., 2023-2024ರ ಸಾಲಿನ ಲೆಕ್ಕ ಪತ್ರ ಮಂಡನೆ ಮಾಡಿದರು. ಶಿಕ್ಷಕ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಚಂದ್ರಕಲಾ ವಂದಿಸಿದರು.ಕಾರ್ಯಕ್ರಮವನ್ನು ಪಾವನ ರೈ ನಿರೂಪಿಸಿದರು.
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490