ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಈಚೆಗೆ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ವಹಿಸಿ, ಶಿಕ್ಷಕ ರಕ್ಷಕ ಸಂಘದ ಪಾತ್ರದ ಮಹತ್ವವನ್ನು ಉಲ್ಲೇಖಿಸುವುದರೊಂದಿಗೆ ಕಾಲೇಜಿನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.ಶೈಕ್ಷಣಿಕ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ನೂತನ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದಯ ಅವರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಪ್ರೇಮ, ಸಹ ಕಾರ್ಯದರ್ಶಿಯಾಗಿ ಸೇಸಮ್ಮ ಇವರು ಆಯ್ಕೆಗೊಂಡರು. ಸದಸ್ಯರುಗಳಾದ ಶಿವಣ್ಣ, ಪಾರ್ವತಿ ಹಾಗೂ ನಾಗೇಶ ಇವರುಗಳು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೂ ಮುಂದುವರಿದರು. ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಡಾ. ನೂರಂದಪ್ಪ ನಡೆಸಿಕೊಟ್ಟರು.
ಕಾರ್ಯಕ್ರಮವು ದಿವ್ಯಶ್ರೀ ಜಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಿಕ್ಷಕರ ಕಾರ್ಯಕಾರಿ ಸಮಿತಿ, ಉಪಾಧ್ಯಕ್ಷ ಡಾ. ಸೀತಾರಾಮ ಪಿ. ಸ್ವಾಗತಿಸಿದರು. ಶಿಕ್ಷಕ- ರಕ್ಷಕ ಸಂಘದ ಖಜಾಂಜಿ ವೆರೋನಿಕಾ ಪ್ರಭಾ ವಿ. ಪಿ., 2023-2024ರ ಸಾಲಿನ ಲೆಕ್ಕ ಪತ್ರ ಮಂಡನೆ ಮಾಡಿದರು. ಶಿಕ್ಷಕ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಚಂದ್ರಕಲಾ ವಂದಿಸಿದರು.ಕಾರ್ಯಕ್ರಮವನ್ನು ಪಾವನ ರೈ ನಿರೂಪಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…