ವಿಶೇಷ ವರದಿಗಳು

ವಿಮಾನ ಅಪಘಾತದ 40 ದಿನಗಳ ಬಳಿಕ ಪತ್ತೆಯಾದ ಮಕ್ಕಳು | ಕೊಲಂಬಿಯಾದ ಅಮೆಜಾನ್‌ ಕಾಡಿನಲ್ಲಿ ಪತನವಾಗಿದ್ದ ವಿಮಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಮಾನ ಅಪಘಾತದಲ್ಲಿ ಬದುಕುಳಿದ ನಾಲ್ಕು ಮಕ್ಕಳು ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ 40 ದಿನಗಳ ನಂತರ ಪತ್ತೆಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಿಲಿಟರಿ ಪಡೆ ಶೋಧ ಕಾರ್ಯ ನಡೆಸುತ್ತಿತ್ತು. ಅಪಘಾತದಲ್ಲಿ ವಿಮಾನದ ಪೈಲಟ್‌ ಹಾಗೂ ಇತರ ಮೂವರು ಶವಗಳನ್ನು ಸೈನ್ಯವು ಅಪಘಾತದ ಸ್ಥಳದಲ್ಲಿ ಪತ್ತೆ ಮಾಡಿತ್ತು. ಆದರೆ ಮಕ್ಕಳ ಸುಳಿವು ಪತೆತಯಾಗಿರಲಿಲ್ಲ.  

Advertisement

ಈ ಮಕ್ಕಳ ಪತ್ತೆ ಕಾರ್ಯದ ಬಳಿಕ ಕೊಲಂಬಿಯಾ ಅಧ್ಯಕ್ಷರು ಹರ್ಷ ವ್ಯಕ್ತಪಡಿಸಿದ್ದು,  “ಇಡೀ ದೇಶಕ್ಕೆ ಸಂತೋಷವಾಗಿದೆ” ಎಂದು ಹೇಳಿದರು.

ಮೇ 1 ರಂದು ಅಮೆಜಾನ್ ಕಾಡಿನಲ್ಲಿ ಅವರ ಲಘು ವಿಮಾನ ಇಂಜಿನ್ ವೈಫಲ್ಯದಿಂದಾಗಿ  ಪತನಗೊಂಡು ಮಕ್ಕಳ ತಾಯಿ ಮತ್ತು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದರು. ಆ ಬಳಿಕ ಮೂವರ ಮೃತದೇಹ ಪತ್ತೆಯಾಗಿತ್ತು, ಆದರೆ ನಾಪತ್ತೆಯಾದ ಮಕ್ಕಳ ಪತ್ತೆಗಾಗಿ ಅಲ್ಲಿನ ಸೇನೆ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ನಡುವೆ ಮಕ್ಕಳು ಪತ್ತೆಯಾಗಿದ್ದಾರೆ ಎಂದು ಕಳೆದ ತಿಂಗಳು ಕೊಲಂಬಿಯಾ ಅಧ್ಯಕ್ಷರು ಟ್ವೀಟ್‌ ಮಾಡಿ ಟೀಕೆಗೆ ಒಳಗಾಗಿದ್ದರು. ಕೊಲಂಬಿಯಾದ ಮಕ್ಕಳ ಕಲ್ಯಾಣ ಸಂಸ್ಥೆಯು ತನ್ನ ಕಚೇರಿಗೆ ನೀಡಿದ ಮಾಹಿತಿಯನ್ನು  ಖಚಿತಪಡಿಸಲು ಸಾಧ್ಯವಿಲ್ಲ ಎಂದು ಅವರು ಮರುದಿನ ಟ್ವೀಟ್ ಮೂಲಕ ತಿಳಿಸಿ ಗೊಂದಲ ನಿವಾರಿಸಿದ್ದರು. ಅದಾದ ಬಳಿಕ ನಿರಂತರ ಪತ್ತೆ ಕಾರ್ಯ ಆರಂಭವಾಗಿತ್ತು.

40 ದಿನಗಳಿಂದ ರಕ್ಷಣೆಗಾಗಿ ಮಕ್ಕಳು ಅಮೆಜಾನ್‌ ಕಾಡಿನಲ್ಲಿ ಓಡಾಟ ಮಾಡುತ್ತಿದ್ದರು, ಇಷ್ಟೂ ದಿನ ಕಾಡಿನ ಗೆಡ್ಡೆಗೆಣಸು ಹಾಗೂ ನೀರು ಕುಡಿದು ಬದುಕಿದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ವಿಮಾನ ಅಪಘಾತದ ನಂತರ ಮೂವರು ಮೃತಪಟ್ಟರೆ, ಮಕ್ಕಳು ಅಪಘಾತ ಸ್ಥಳದಿಂದ ತಪ್ಪಿಸಿಕೊಂಡಿದ್ದರು. ಸಹಾಯಕ್ಕಾಗಿ ಮಳೆಕಾಡಿನಲ್ಲಿ ಅಲೆದಾಡಿದರು. ಸೇನಾ ಪಡೆಯುವ ವಿಮಾನ ಹಾಗೂ ಮೃತದೇಹ ಪತ್ತೆಯ ಬಳಿಕ ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಕಾಡಿನಲ್ಲಿ ಸಣ್ಣ ಹೆಜ್ಜೆಗುರುತುಗಳನ್ನು  ಕಂಡುಹಿಡಿದಿದ್ದರು. ಹೀಗಾಗಿ ಮಕ್ಕಳ ಇರುವಿಕೆ ಬಗ್ಗೆ ಆಗ ಖಚಿತ ಪಡಿಸಿದರೂ ದಿನ ಉರುಳಿದಂತೆ ಬದುಕಿರುವ ಸಾಧ್ಯತೆ ಕ್ಷೀಣವಾಗ ತೊಡಗಿತ್ತು. ಆದರೆ ಮಳೆಕಾಡಿನಲ್ಲಿ ಮಕ್ಕಳು ಇನ್ನೂ ಜೀವಂತವಾಗಿದ್ದಾರೆ ಎಂದು ಶೋಧ ತಂಡಗಳು ಖಚಿತ ಪಡಿಸಿ ಹುಡುಕಾಟ ಆರಂಭ ಮಾಡಿತ್ತು. ಮಕ್ಕಳ ಸಮುದಾಯದ ಸದಸ್ಯರು ಹಣ್ಣುಗಳು ಮತ್ತು ಕಾಡಿನ ಬದುಕುಳಿಯುವ ಕೌಶಲ್ಯಗಳ ಬಗ್ಗೆ ಅವರ ಜ್ಞಾನವನ್ನು ಹಂಚಿಕೊಂಡಿದ್ದರು. ಇದರ ಪರಿಣಾಮವಾಗಿ ಮಕ್ಕಳು ಕಾಡಿನಲ್ಲಿ ಜೀವಂತವಾಗಿ ಉಳಿಯಲು ಉತ್ತಮ ಅವಕಾಶ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

4 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

5 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

15 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

15 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

18 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

18 hours ago