Advertisement
ವಿಶೇಷ ವರದಿಗಳು

ವಿಮಾನ ಅಪಘಾತದ 40 ದಿನಗಳ ಬಳಿಕ ಪತ್ತೆಯಾದ ಮಕ್ಕಳು | ಕೊಲಂಬಿಯಾದ ಅಮೆಜಾನ್‌ ಕಾಡಿನಲ್ಲಿ ಪತನವಾಗಿದ್ದ ವಿಮಾನ |

Share

ವಿಮಾನ ಅಪಘಾತದಲ್ಲಿ ಬದುಕುಳಿದ ನಾಲ್ಕು ಮಕ್ಕಳು ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ 40 ದಿನಗಳ ನಂತರ ಪತ್ತೆಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಿಲಿಟರಿ ಪಡೆ ಶೋಧ ಕಾರ್ಯ ನಡೆಸುತ್ತಿತ್ತು. ಅಪಘಾತದಲ್ಲಿ ವಿಮಾನದ ಪೈಲಟ್‌ ಹಾಗೂ ಇತರ ಮೂವರು ಶವಗಳನ್ನು ಸೈನ್ಯವು ಅಪಘಾತದ ಸ್ಥಳದಲ್ಲಿ ಪತ್ತೆ ಮಾಡಿತ್ತು. ಆದರೆ ಮಕ್ಕಳ ಸುಳಿವು ಪತೆತಯಾಗಿರಲಿಲ್ಲ.  

ಈ ಮಕ್ಕಳ ಪತ್ತೆ ಕಾರ್ಯದ ಬಳಿಕ ಕೊಲಂಬಿಯಾ ಅಧ್ಯಕ್ಷರು ಹರ್ಷ ವ್ಯಕ್ತಪಡಿಸಿದ್ದು,  “ಇಡೀ ದೇಶಕ್ಕೆ ಸಂತೋಷವಾಗಿದೆ” ಎಂದು ಹೇಳಿದರು.

ಮೇ 1 ರಂದು ಅಮೆಜಾನ್ ಕಾಡಿನಲ್ಲಿ ಅವರ ಲಘು ವಿಮಾನ ಇಂಜಿನ್ ವೈಫಲ್ಯದಿಂದಾಗಿ  ಪತನಗೊಂಡು ಮಕ್ಕಳ ತಾಯಿ ಮತ್ತು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದರು. ಆ ಬಳಿಕ ಮೂವರ ಮೃತದೇಹ ಪತ್ತೆಯಾಗಿತ್ತು, ಆದರೆ ನಾಪತ್ತೆಯಾದ ಮಕ್ಕಳ ಪತ್ತೆಗಾಗಿ ಅಲ್ಲಿನ ಸೇನೆ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ನಡುವೆ ಮಕ್ಕಳು ಪತ್ತೆಯಾಗಿದ್ದಾರೆ ಎಂದು ಕಳೆದ ತಿಂಗಳು ಕೊಲಂಬಿಯಾ ಅಧ್ಯಕ್ಷರು ಟ್ವೀಟ್‌ ಮಾಡಿ ಟೀಕೆಗೆ ಒಳಗಾಗಿದ್ದರು. ಕೊಲಂಬಿಯಾದ ಮಕ್ಕಳ ಕಲ್ಯಾಣ ಸಂಸ್ಥೆಯು ತನ್ನ ಕಚೇರಿಗೆ ನೀಡಿದ ಮಾಹಿತಿಯನ್ನು  ಖಚಿತಪಡಿಸಲು ಸಾಧ್ಯವಿಲ್ಲ ಎಂದು ಅವರು ಮರುದಿನ ಟ್ವೀಟ್ ಮೂಲಕ ತಿಳಿಸಿ ಗೊಂದಲ ನಿವಾರಿಸಿದ್ದರು. ಅದಾದ ಬಳಿಕ ನಿರಂತರ ಪತ್ತೆ ಕಾರ್ಯ ಆರಂಭವಾಗಿತ್ತು.

40 ದಿನಗಳಿಂದ ರಕ್ಷಣೆಗಾಗಿ ಮಕ್ಕಳು ಅಮೆಜಾನ್‌ ಕಾಡಿನಲ್ಲಿ ಓಡಾಟ ಮಾಡುತ್ತಿದ್ದರು, ಇಷ್ಟೂ ದಿನ ಕಾಡಿನ ಗೆಡ್ಡೆಗೆಣಸು ಹಾಗೂ ನೀರು ಕುಡಿದು ಬದುಕಿದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ವಿಮಾನ ಅಪಘಾತದ ನಂತರ ಮೂವರು ಮೃತಪಟ್ಟರೆ, ಮಕ್ಕಳು ಅಪಘಾತ ಸ್ಥಳದಿಂದ ತಪ್ಪಿಸಿಕೊಂಡಿದ್ದರು. ಸಹಾಯಕ್ಕಾಗಿ ಮಳೆಕಾಡಿನಲ್ಲಿ ಅಲೆದಾಡಿದರು. ಸೇನಾ ಪಡೆಯುವ ವಿಮಾನ ಹಾಗೂ ಮೃತದೇಹ ಪತ್ತೆಯ ಬಳಿಕ ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಕಾಡಿನಲ್ಲಿ ಸಣ್ಣ ಹೆಜ್ಜೆಗುರುತುಗಳನ್ನು  ಕಂಡುಹಿಡಿದಿದ್ದರು. ಹೀಗಾಗಿ ಮಕ್ಕಳ ಇರುವಿಕೆ ಬಗ್ಗೆ ಆಗ ಖಚಿತ ಪಡಿಸಿದರೂ ದಿನ ಉರುಳಿದಂತೆ ಬದುಕಿರುವ ಸಾಧ್ಯತೆ ಕ್ಷೀಣವಾಗ ತೊಡಗಿತ್ತು. ಆದರೆ ಮಳೆಕಾಡಿನಲ್ಲಿ ಮಕ್ಕಳು ಇನ್ನೂ ಜೀವಂತವಾಗಿದ್ದಾರೆ ಎಂದು ಶೋಧ ತಂಡಗಳು ಖಚಿತ ಪಡಿಸಿ ಹುಡುಕಾಟ ಆರಂಭ ಮಾಡಿತ್ತು. ಮಕ್ಕಳ ಸಮುದಾಯದ ಸದಸ್ಯರು ಹಣ್ಣುಗಳು ಮತ್ತು ಕಾಡಿನ ಬದುಕುಳಿಯುವ ಕೌಶಲ್ಯಗಳ ಬಗ್ಗೆ ಅವರ ಜ್ಞಾನವನ್ನು ಹಂಚಿಕೊಂಡಿದ್ದರು. ಇದರ ಪರಿಣಾಮವಾಗಿ ಮಕ್ಕಳು ಕಾಡಿನಲ್ಲಿ ಜೀವಂತವಾಗಿ ಉಳಿಯಲು ಉತ್ತಮ ಅವಕಾಶ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

4 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

11 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

13 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

13 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

19 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 day ago