Advertisement
MIRROR FOCUS

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

Share

ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು   ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ವಿಧಾನಸೌಧದ ಮುಖ್ಯ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ಮಂಗಳೂರು – ಬೆಂಗಳೂರು ನಡುವಿನ ಮುಖ್ಯ ಸಂಪರ್ಕವಾಗಿರುವ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲು ಹಳಿ ಸುಧಾರಣೆ ಸಂಬಂಧ ಡಿಪಿಆರ್ ತಯಾರಿ ಪ್ರಕ್ರಿಯೆ ನಡೆಯುತ್ತಿದೆ. ರಾಜಧಾನಿ ಬೆಂಗಳೂರಿನಿಂದ ಕರಾವಳಿ ನಗರಗಳಿಗೆ ಪ್ರಮುಖ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಈಗ ಇರುವ ರಸ್ತೆಗೆ ಹೆಚ್ಚುವರಿ ದ್ವಿಪಥ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ತಯಾರಿಗೆ ಮುಂದಾಗಿದೆ.  ಇದಲ್ಲದೇ ಶಿರಾಡಿ ಘಾಟ್‌ನಲ್ಲಿ ಪ್ರತ್ಯೇಕ ರೈಲು ಮಾರ್ಗ ರಚಿಸಲು ರೈಲ್ವೆ ಇಲಾಖೆ ಕೂಡ ಡಿಪಿಆರ್‌ ಸಿದ್ಧಪಡಿಸಲು ಮುಂದಾಗಿದೆ. ಆದರೆ ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ ಮೇಲಾಗುವ ಪರಿಣಾಮವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ.  ಅಲ್ಲದೆ ಸಂಯೋಜಿತ ಯೋಜನೆ ರೂಪಿಸುವುದರಿಂದ ಇಲಾಖೆಗಳ ಅನುಮೋದನೆ ಪಡೆಯುವುದು ಸುಲಭವಾಗುತ್ತದೆ. ಅದಕ್ಕಿಂತಲೂ ಮುಖ್ಯವಾಗಿ ಅರಣ್ಯ ಇಲಾಖೆಯ ಅನುಮತಿ ಪಡೆಯುವುದಕ್ಕೂ ಅನುಕೂಲವಾಗಲಿದೆ ಎಂದು ಇದೇ ವೇಳೆ ಸಂಸದರು ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿದ್ದಾರೆ.

ಮಂಗಳೂರು ಬಂದರು ಹಾಗೂ ಕರಾವಳಿ ಅಭಿವೃದ್ದಿ ದೃಷ್ಟಿಯಿಂದ ಶಿರಾಡಿ ಘಾಟಿ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವುದು ಅತ್ಯವಶ್ಯಕವಾಗಿದೆ. ಅದೇ ರೀತಿ ಕರಾವಳಿ ಭಾಗಕ್ಕೆ ಹೆಚ್ಚಿನ ರೈಲು ಸಂಪರ್ಕವನ್ನು ಆರಂಭಿಸುವುದಕ್ಕೆ ಶಿರಾಡಿ ಘಾಟಿ ಭಾಗದಲ್ಲಿ ರೈಲ್ವೇ ಮೂಲಸೌಕರ್ಯವನ್ನು ಕೂಡಾ ಹೆಚ್ಚಿಸಬೇಕಾಗಿದೆ.  ರೈಲು ಹಾಗೂ ಹೆದ್ದಾರಿಗಳು ಒಟ್ಟಿಗೆ ಅಭಿವೃದ್ದಿಯಾದರೆ ಮಂಗಳೂರಿನ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಹಾಗೂ ಸರಕು ಸಾಗಾಟ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ಶಿರಾಡಿ ಘಾಟಿಯಲ್ಲಿ ರಸ್ತೆ ಮತ್ತು ರೈಲ್ವೇ ಅಭಿವೃದ್ದಿ  ಹಿನ್ನಲೆಯಲ್ಲಿ ಸಂಯೋಜಿತ ಡಿಪಿಆರ್ ತಯಾರಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಈಗಾಗಲೇ  ಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಹೀಗಿರುವಾಗ ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಒಂದಕ್ಕೊಂದು ಪೂರಕ ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.

ರಸ್ತೆ ಹಾಗೂ ರೈಲು ಮೂಲಸೌಕರ್ಯ ಹೆಚ್ಚಿಸುವುದಕ್ಕೆ  ಸಂಬಂಧಪಟ್ಟ ಇಲಾಖೆಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಕೇಂದ್ರದ ಏಜೆನ್ಸಿಗಳಿಗೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭರವಸೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 hour ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 hour ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

4 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

13 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

14 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

20 hours ago