Advertisement
MIRROR FOCUS

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

Share

ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು   ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ವಿಧಾನಸೌಧದ ಮುಖ್ಯ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ಮಂಗಳೂರು – ಬೆಂಗಳೂರು ನಡುವಿನ ಮುಖ್ಯ ಸಂಪರ್ಕವಾಗಿರುವ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲು ಹಳಿ ಸುಧಾರಣೆ ಸಂಬಂಧ ಡಿಪಿಆರ್ ತಯಾರಿ ಪ್ರಕ್ರಿಯೆ ನಡೆಯುತ್ತಿದೆ. ರಾಜಧಾನಿ ಬೆಂಗಳೂರಿನಿಂದ ಕರಾವಳಿ ನಗರಗಳಿಗೆ ಪ್ರಮುಖ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಈಗ ಇರುವ ರಸ್ತೆಗೆ ಹೆಚ್ಚುವರಿ ದ್ವಿಪಥ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ತಯಾರಿಗೆ ಮುಂದಾಗಿದೆ.  ಇದಲ್ಲದೇ ಶಿರಾಡಿ ಘಾಟ್‌ನಲ್ಲಿ ಪ್ರತ್ಯೇಕ ರೈಲು ಮಾರ್ಗ ರಚಿಸಲು ರೈಲ್ವೆ ಇಲಾಖೆ ಕೂಡ ಡಿಪಿಆರ್‌ ಸಿದ್ಧಪಡಿಸಲು ಮುಂದಾಗಿದೆ. ಆದರೆ ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ ಮೇಲಾಗುವ ಪರಿಣಾಮವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ.  ಅಲ್ಲದೆ ಸಂಯೋಜಿತ ಯೋಜನೆ ರೂಪಿಸುವುದರಿಂದ ಇಲಾಖೆಗಳ ಅನುಮೋದನೆ ಪಡೆಯುವುದು ಸುಲಭವಾಗುತ್ತದೆ. ಅದಕ್ಕಿಂತಲೂ ಮುಖ್ಯವಾಗಿ ಅರಣ್ಯ ಇಲಾಖೆಯ ಅನುಮತಿ ಪಡೆಯುವುದಕ್ಕೂ ಅನುಕೂಲವಾಗಲಿದೆ ಎಂದು ಇದೇ ವೇಳೆ ಸಂಸದರು ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿದ್ದಾರೆ.

ಮಂಗಳೂರು ಬಂದರು ಹಾಗೂ ಕರಾವಳಿ ಅಭಿವೃದ್ದಿ ದೃಷ್ಟಿಯಿಂದ ಶಿರಾಡಿ ಘಾಟಿ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವುದು ಅತ್ಯವಶ್ಯಕವಾಗಿದೆ. ಅದೇ ರೀತಿ ಕರಾವಳಿ ಭಾಗಕ್ಕೆ ಹೆಚ್ಚಿನ ರೈಲು ಸಂಪರ್ಕವನ್ನು ಆರಂಭಿಸುವುದಕ್ಕೆ ಶಿರಾಡಿ ಘಾಟಿ ಭಾಗದಲ್ಲಿ ರೈಲ್ವೇ ಮೂಲಸೌಕರ್ಯವನ್ನು ಕೂಡಾ ಹೆಚ್ಚಿಸಬೇಕಾಗಿದೆ.  ರೈಲು ಹಾಗೂ ಹೆದ್ದಾರಿಗಳು ಒಟ್ಟಿಗೆ ಅಭಿವೃದ್ದಿಯಾದರೆ ಮಂಗಳೂರಿನ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಹಾಗೂ ಸರಕು ಸಾಗಾಟ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ಶಿರಾಡಿ ಘಾಟಿಯಲ್ಲಿ ರಸ್ತೆ ಮತ್ತು ರೈಲ್ವೇ ಅಭಿವೃದ್ದಿ  ಹಿನ್ನಲೆಯಲ್ಲಿ ಸಂಯೋಜಿತ ಡಿಪಿಆರ್ ತಯಾರಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಈಗಾಗಲೇ  ಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಹೀಗಿರುವಾಗ ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಒಂದಕ್ಕೊಂದು ಪೂರಕ ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.

ರಸ್ತೆ ಹಾಗೂ ರೈಲು ಮೂಲಸೌಕರ್ಯ ಹೆಚ್ಚಿಸುವುದಕ್ಕೆ  ಸಂಬಂಧಪಟ್ಟ ಇಲಾಖೆಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಕೇಂದ್ರದ ಏಜೆನ್ಸಿಗಳಿಗೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭರವಸೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

10 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

21 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

21 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago