Advertisement
ಸುದ್ದಿಗಳು

#PriceHike | ಮತ್ತೆ ಬೆಲೆ ಏರಿಕೆ ಬರೆ | ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ |

Share

ಬೆಲೆ ಏರಿಕೆ ಬೆಲೆ ಬರೆ ಮತ್ತೆ ಮತ್ತೆ ಗಾಯದ ಮೇಲೆ ಬೀಳುತ್ತಲೇ ಇದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಸುವ ಮೂಲಕ ಹೊಟೆಲ್ ತಿಂಡಿಗಳ ಬೆಲೆ ಏರಿಕೆ #Pricehikeಯ ಬಿಸಿ ಮುಂದೆ ತಾಗುವುದರಲ್ಲಿ ಸಂಶಯವಿಲ್ಲ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ವಾಣಿಜ್ಯ ಬಳಕೆ ಸಿಲಿಂಡರ್‌ #CommercialCylinder ಬೆಲೆ ಏರಿಕೆಯಾಗಿದೆ.

19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್, ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.

ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ವಾಣಿಜ್ಯ LPG ಗೆ ಮೊದಲ ಬೆಲೆ ಏರಿಕೆಯಾಗಿದೆ. ಮೇ ತಿಂಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್‌ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…

3 hours ago

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

21 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

1 day ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

1 day ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 day ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

2 days ago