Advertisement
Opinion

#Backache | ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಬೆನ್ನು ನೋವು | ಆಯುರ್ವೇದ ಚಿಕಿತ್ಸೆ ಮೂಲಕ ನೋವಿನಿಂದ ಹೊರಬನ್ನಿ‌ |

Share

ಇಂದಿನ ಆಧುನಿಕ ಯುಗದಲ್ಲಿ ಅಧಿಕ ಕಾರ್ಯ ಒತ್ತಡಗಳಿಂದ ಸಾಮಾನ್ಯವಾಗಿ ಉಂಟಾಗುವ ಸಮಸ್ಯೆ ಅಂದರೆ ಅದುವೇ ಸೊಂಟ ನೋವು. ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

ಸೊಂಟ ನೋವಿಗೆ ಸಾಮಾನ್ಯ ಕಾರಣಗಳು :
* ದೀರ್ಘಾವಧಿ ಯವರಿಗೆ ಒಂದೇ ಬದಿಯಲ್ಲಿ / ಭಂಗಿಯಲ್ಲಿ ಮಲಗುವುದು
* ಅತಿಯಾದ ಶ್ರಮ / ಪ್ರಯಾಣ
* ವಿಚಿತ್ರವಾದ ಭಂಗಿಯಲ್ಲಿ ಕುಳಿತು ಕೊಳ್ಳುವುದು
* ಅತಿಯಾಗಿ ಬಗ್ಗಿಕೊಂಡೆ ಅತಿ ಕೆಲಸ ಮಾಡುವುದು
* ಉಳುಕು ಮೂಳೆ ಮುರಿತ
* ಏಕಕಾಲದಲ್ಲಿ ಅತಿ ವ್ಯಾಯಾಮ ಮಾಡುವುದು

ಸೊಂಟ ನೋವು ತಡೆಗಟ್ಟಲು ಸುಲಭ ಪರಿಹಾರಗಳು :
* ಸುರಕ್ಷಿತ ಮತ್ತು ಆರೋಗ್ಯಕರ ವ್ಯಾಯಾಮಗಳು
* ಯೋಗಾಸನ
* ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು
* ನೇರವಾಗಿ ನಿಂತುಕೊಳ್ಳುವುದು ನೇರವಾಗಿ ನಡೆಯುವುದು ನೇರವಾಗಿ ಮಲಗುವುದು
* ನೋವಿನ ಪ್ರದೇಶದಲ್ಲಿ ಬಿಸಿ ನೀರಿನ ಶಾಖ ಕೊಡುವುದು
* ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾದ ತೈಲ ಗಳಿಂದ ನೋವಿನ ಜಾಗಕ್ಕೆ ಮಸಾಜ್ ಮಾಡುವುದು.
* ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಒಂದಾದ ಪಂಚಕರ್ಮ ಚಿಕಿತ್ಸೆ ಸೊಂಟ ನೋವಿಗೆ ಉತ್ತಮ ಚಿಕಿತ್ಸೆ ಆಗಿದೆ ಅದರಲ್ಲಿ ಕಟ್ಟಿಬಸ್ತಿ ಚಿಕಿತ್ಸಾ ವಿಧಾನದಿಂದ ಸೊಂಟ ನೋವು ನಿವಾರಣೆ ಮಾಡಬಹುದು.

ನಿಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ನಿಮಗೆ ತೊಂದರೆಗಳಾದಲ್ಲಿ ದಯವಿಟ್ಟು ನಿರ್ಲಕ್ಷಿಸಬೇಡಿ. ನೋವು ಕೆಲವು ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ನೋವಿನ ಕಾರಣ ಕಂಡುಹಿಡಿಯಬಹುದು ಮತ್ತು ಅದನ್ನು ನಿರ್ವಹಿಸಲು ಯೋಜನೆಯನ್ನು ರೂಪಿಸಬಹುದು. ಸೊಂಟ ನೋವನ್ನು ನಿರ್ಲಕ್ಷಿಸಿದರೆ ಮತ್ತು ಚಿಕಿತ್ಸೆ ನೀಡದೆ ಹೋದಲ್ಲಿ ಅದು ಹೆಚ್ಚಿನ ಗಂಭೀರ ಸಮಸ್ಯೆಗಳಿಗೆ( ಅಂಗವೈಕಲ್ಯಕ್ಕೆ) ಕಾರಣವಾಗಬಹುದು.

ಬರಹ :
ಡಾ.ಜ್ಯೋತಿ, ಲಕ್ಷ್ಮಿ ಕ್ಲಿನಿಕ್ ಮಂಗಳೂರು, 94481 680
53
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago